ಬರಹ : ಮುಹಮ್ಮದ್ ಉಳ್ಳಾಲ್.
ಮೊಬೈಲ್ : 7022822983
ಸೋಮೇಶ್ವರ ಉಚ್ಚಿಲದ ಅಂಡರ್ ಪಾಸ್ ರಸ್ತೆಯು ನಿನ್ನೆ ಸುರಿದ ಧಾರಾಕಾರ ಮಳೆಯಿಂದಾಗಿ ಜಲಾವೃತ ಗೊಂಡಿದೆ.ಮಳೆಗಾಲದಲ್ಲಿ ಇಲ್ಲಿಯ ಅಂಡರ್ ಪಾಸ್ ಒಳಗಡೆ ಮಳೆ ನೀರು ನಿಂತು ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.
ಸ್ಥಳೀಯ ನಿವಾಸಿಗಳೂ, ವಾಹನ ಸವಾರರೂ ಸಂಚರಿಸಲು ಹರ ಸಾಹಸ ಪಡುವಂತಾಗಿದೆ. ಮಳೆಗಾಲದಲ್ಲಿ ಇಲ್ಲಿನ ನಿವಾಸಿಗಳು ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದಾರೆ.
ಅಂಡರ್ ಪಾಸ್ ಗಳನ್ನು ನಿರ್ಮಿಸುವಾಗ ಸಲೀಸಾಗಿ
ಮಳೆ ನೀರು ಹೊರ ಹೋಗುವಂತೆ ವೈಜ್ಞಾನಿಕ
ರೀತಿಯಲ್ಲಿ ನಿರ್ಮಾಣ ಮಾಡದೇ ಇರುವುದರಿಂದ ಈ ಸಮಸ್ಯೆಗಳು ಉದ್ಭವಿಸುತ್ತಿದ್ದು, ಪ್ರತೀ ಮಳೆಗಾಲದಲ್ಲಿ ಇಲ್ಲಿಯ ಜನರು ನರಕ ಯಾತನೆ ಅನುಭವಿಸುವಂತಾಗಿದೆ.ಮಳೆ ನೀರು ಸಮರ್ಪಕವಾಗಿ ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದರಿಂದ ಅಂಡರ್ ಪಾಸ್
ನಲ್ಲಿ ನೀರು ನಿಂತು ಕೃತಕ ಈಜು ಕೊಳ ನಿರ್ಮಾಣವಾಗಿದೆ.
ಸ್ಥಳೀಯ ಜನರು ಪ್ರತೀ ಬಾರಿ ಮಳೆ ಬಂದಾಗಲೂ ಈ ಸಮಸ್ಯೆಯಲ್ಲಿ ಸಂಚಾರ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ. ಇಲ್ಲಿಯ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕೂಡಲೇ ಈ ಸಮಸ್ಯೆಯ ಕಡೆಗೆ ಗಮನ ಹರಿಸಬೇಕಾಗಿದೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್