ಬೆಂಗಳೂರು: ಕೋಮು ಪ್ರಚೋದಕ ಪೋಸ್ಟ್ ಸಂಬಂಧ ಬೆಂಗಳೂರಿನಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ನೂರಕ್ಕೂ ಅಧಿಕ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ 110 ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೇ, ಕೋಮು ಪ್ರಚೋದಕ ಪೋಸ್ಟ್ ಹಾಕಿದ್ದ ಆರೋಪಿ ನವೀನ್ ನನ್ನು ಕೂಡಾ ಪೊಲೀಸರು ಬಂಧಿಸಿದ್ದಾರೆ
ಈ ಸಂಬಂಧ ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿ.ಜೆ ಹಳ್ಳಿ ಘಟನೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ನವೀನ್ ನನ್ನು ದಸ್ತಗಿರಿ ಮಾಡಲಾಗಿದೆ. ಜೊತೆಗೆ ಬೆಂಕಿ ಹಚ್ಚಿದ, ಕಲ್ಲು ತೂರಾಟ ನಡೆಸಿದ, ಪೊಲೀಸರ ಮೇಲೆ ಹಲ್ಲೆ ನಡೆಸಿದ ಇತರೆ 110 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದು, ನಗರದಲ್ಲಿ ಶಾಂತಿ ಕಾಪಾಡಲು ಎಲ್ಲರೂ ಪೊಲೀಸರೊಂದಿಗೆ ಸಹಕರಿಸಬೇಕಾಗಿ ವಿನಂತಿ ಎಂದು ಮನವಿ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ