ಶಾಸಕರ ಸಂಬಂಧಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸ. ಅ)ರವರನ್ನು ನಿಂದಿಸಿ ಪೋಸ್ಟ್ ಹಾಕಿದ ಕಾರಣದಿಂದ ಉತ್ತರ ಬೆಂಗಳೂರಿನ ಕೆಲವು ಭಾಗಗಳಲ್ಲಿ ಘರ್ಷಣೆ ನಡೆದಿದೆ.
ಇಸ್ಲಾಂ ಶಾಂತಿಯ ಧರ್ಮ. ಇತರ ಧರ್ಮೀಯರು ಗೌರವಿಸುವ ಹಾಗೂ ಮುಸ್ಲಿಮರು ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಪ್ರವಾದಿ (ಸ. ಅ) ರವರ ನಿಂದನೆ ನಾವು ಸಹಿಸುವುದಿಲ್ಲ. ನಮ್ಮ ಆಕ್ರೋಶ ಧಾರ್ಮಿಕ ಭಾವನೆ ಕೆರಳಿಸುವವರ ವಿರುದ್ಧ ಆಗಿರಬೇಕೇ ಹೊರತು,ಕಾನೂನು ಪಾಲಕರ ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿ ನಷ್ಟ, ಕಾನೂನು ಕೈಗೆತ್ತಿಕೊಂಡು ಶಾಂತಿ ಕದಡುವ ಪ್ರಯತ್ನಗಳು ಆಗಬಾರದು. ಇಂತಹ ಸಂದರ್ಭದಲ್ಲಿ ಪ್ರಜ್ಞಾವಂತ ನಾಗರಿಕರಾದ ನಾವು ವಿವೇಕಪೂರ್ಣದಿಂದ ಕಾನೂನು ಬದ್ಧವಾಗಿ ಪ್ರತಿಭಟಿಸಬೇಕು.
ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಿಸುವ ಸಲುವಾಗಿ ನಿರಂತರವಾಗಿ ಸಾಮಾಜಿಕ ಜಾಲತಾಣಗಳಲ್ಲಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕಿಡಿಗೇಡಿಗಳ ಇಂಥಹ ಕೃತ್ಯಗಳಿಗೆ, ಕಾನೂನು ರೀತಿಯಲ್ಲಿ ಕಠಿಣ ಕ್ರಮ ಕೈ ಗೊಳ್ಳದೇ ಇದ್ದಲ್ಲಿ, ಇಂತಹ ಕೃತ್ಯಗಳು ಮರುಕಳಿಸುವುದರಲ್ಲಿ ಸಂಶಯವಿಲ್ಲ.
ಕಾನೂನಾತ್ಮಕ ರೀತಿಯಲ್ಲಿ ಪ್ರತಿಭಟಿಸಿ, ಯಾವುದೇ ಕಾರಣಕ್ಕೂ ವದಂತಿಗಳಿಗೆ ಕಿವಿಗೊಡದೆ, ಉದ್ವೇಗಕ್ಕೊಳಗಾಗದೆ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಹಕರಿಸಿ, ಶಾಂತಿ ನೆಲೆಸಲು ಸಹಕಾರ ನೀಡಬೇಕು.
ಧಾರ್ಮಿಕ ಭಾವೈಕ್ಯತೆಗೆ ಧಕ್ಕೆ ತಂದು ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪಿಗೆ ಕಾನೂನಿನಡಿಯಲ್ಲಿ ತಕ್ಕ ಶಿಕ್ಷೆ ನೀಡಬೇಕು ಹಾಗೆಯೇ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಎಸ್ ಕೆ ಎಸ್ ಎಸ್ ಎಫ್ ಜಿಸಿಸಿ ಕೊಡಗು ಘಟಕ ಆಗ್ರಹಿಸಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ