ಕೈರಂಗಳ:ಇಲ್ಲಿನ ಅಲ್-ಅಮೀನ್ ಫ್ರೆಂಡ್ಸ್ ಕೈರಂಗಳ ವತಿಯಿಂದ 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಡಿ.ಜಿ ಕಟ್ಟೆಯ ಸಂಸ್ಥೆಯ ಕಛೇರಿ ಮುಂಭಾಗದಲ್ಲಿ ಆಚರಿಸಲಾಯಿತು.
ತಾ.ಪಂ ಸದಸ್ಯರಾದ ಹೈದರ್ ಕೈರಂಗಳ ಇವರು ಧ್ವಜಾರೋಹಣ ನೇರವೇರಿಸಿ ಸ್ವಾತಂತ್ರ್ಯ ಸಂಗ್ರಾಮದ ಕುರಿತು ಮಾತನಾಡಿದರು.ತೋಟಾಲ್ ಜುಮಾ ಮಸೀದಿ ಖತೀಬರಾದ ಮುಹಿಯ್ಯದ್ದೀನ್ ಸಹದಿ ತೋಟಾಲ್ ದುವಾ ನೆರವೇರಿಸಿ ಸಂದೇಶ ಭಾಷಣಗೈದರು.ಕೊಣಾಜೆ ಪೋಲೀಸ್ ಠಾಣಾ ವ್ರತ್ತಾಧಿಕಾರಿ ಮಧುಸೂದನ್ ಸರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ,ಸ್ವಾತಂತ್ರ್ಯದ ಕಿಚ್ಚು ನಮ್ಮಲ್ಲಿ ಎಂದೂ ಇರಬೇಕು,ಹಲವಾರು ಜಾತಿ,ಮತ,ಧರ್ಮ,ಬಣ್ಣ ಗಳಲ್ಲಿ ಗುರುತಿಸಿರುವ ನಾವೆಲ್ಲರೂ ಭಾರತೀಯತೆಯನ್ನು ಉಳಿಸಿಕೊಳ್ಳಬೇಕು ಎಂದು ಸ್ವಾತಂತ್ಯದ ಸಂದೇಶ ನೀಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ತೋಟಾಲ್ ಮಸೀದಿ ಮುಅಲ್ಲಿಂ ಹಮೀದ್ ಮುಸ್ಲಿಯಾರ್,ಹಸನ್ ಮುಸ್ಲಿಯಾರ್,ಹಿರಿಯರಾದ ಅಹ್ಮದ್ ಕುಂಙಿ,ಅಲ್-ಅಮೀನ್ ನಿರ್ದೇಶಕರು ಇಕ್ಬಾಲ್ ಕೈರಂಗಳ,SSF ಅಧ್ಯಕ್ಷರಾದ ಅಬ್ಬಾಸ್ ವಿದ್ಯಾನಗರ,ಮತ್ತಿತರರು ಉಪಸ್ಥಿತರಿದ್ದರು.
ಸಂಸ್ಥೆಯ ಅಧ್ಯಕ್ಷ ಶಿನಾನ್ ಸುಟ್ಟ ಸ್ವಾಗತಿಸಿ,ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್