ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್) ಮತ್ತು ಜಂಟಿ ಪ್ರವೇಶ ಪರೀಕ್ಷೆ(ಜೆಇಇ) ನಿಗದಿಯಂತೆ ಸೆಪ್ಟೆಂಬರ್ ನಲ್ಲಿ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು, ಅದನ್ನು ತಳ್ಳಿಹಾಕಿರುವ ಸುಪ್ರೀಂ ಕೋರ್ಟ್, ಯುವಜನತೆಯ ವೃತ್ತಿಬದುಕನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.
ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಬೇಕೆಂದು 11 ಮಂದಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಅರ್ಜಿಯನ್ನು ನಿರಾಕರಿಸಿರುವುದರಿಂದ ಸೆಪ್ಟೆಂಬರ್ ನಲ್ಲಿಯೇ ಪರೀಕ್ಷೆ ನಡೆಯಲಿದೆ.
ಕೊರೋನಾ ಇದೆ ಎಂದು ಜೀವನ ನಿಲ್ಲಿಸಲು ಸಾಧ್ಯವಿಲ್ಲ. ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು ಮುಂದುವರಿಯಬೇಕು. ವಿದ್ಯಾರ್ಥಿಗಳು ಒಂದು ವರ್ಷವಿಡೀ ಹಾಳು ಮಾಡಲು ಸಿದ್ದರಿದ್ದೀರಾ? ಶಿಕ್ಷಣ ವ್ಯವಸ್ಥೆ ಮುಕ್ತವಾಗಬೇಕು. ಕೋವಿಡ್ ಒಂದು ವರ್ಷದವರೆಗೆ ಮುಂದೆ ಹೋಗಬಹುದು. ಮತ್ತೊಂದು ವರ್ಷ ನೀವು(ವಿದ್ಯಾರ್ಥಿಗಳು) ಕಾಯುತ್ತೀರಾ? ಇದರಿಂದ ವಿದ್ಯಾರ್ಥಿಗಳಿಗೆ ಮತ್ತು ದೇಶಕ್ಕೆ ಎಷ್ಟು ನಷ್ಟ ಎಂದು ಗೊತ್ತೇ ನಿಮಗೆ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಮೂವರು ನ್ಯಾಯಮೂರ್ತಿಗಳನ್ನೊಳಗೊಂಡ ಪೀಠ ಇಂದು ವಿಚಾರಣೆ ವೇಳೆ ಪ್ರಶ್ನಿಸಿತು.
11 ರಾಜ್ಯಗಳ 11 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಕೊರೋನಾ ಕಡಿಮೆಯಾಗಿ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ಮೇಲೆಯೇ ಪರೀಕ್ಷೆ ನಡೆಸಬೇಕೆಂದು ಮತ್ತು ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸುವಂತೆ ಕೂಡ ಒತ್ತಾಯಿಸಿದ್ದರು.
ಇಂದು ವಿದ್ಯಾರ್ಥಿಗಳ ಪರ ವಾದ ಮಂಡಿಸಿದ ನ್ಯಾಯವಾದಿ ಅಲಕ್ ಅಲೋಕ್ ಶ್ರೀವಾಸ್ತವ, ವಿದ್ಯಾರ್ಥಿಗಳು ಪರಿಹಾರಕ್ಕೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ ಎಂದರು.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪರವಾಗಿ ವಾದ ಮಂಡಿಸಿದ ಸೊಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪರೀಕ್ಷೆ ನಡೆಸಲು ಎಲ್ಲಾ ಮುನ್ನೆಚ್ಚರಿಕೆ ವಹಿಸುವುದಾಗಿ ಹೇಳಿದರು. ಜೆಇಇ ಪರೀಕ್ಷೆ ಸೆಪ್ಟೆಂಬರ್ 1ರಿಂದ 6ರವರೆಗೆ, ನೀಟ್ ಪರೀಕ್ಷೆ ಸೆಪ್ಟೆಂಬರ್ 13ರವರೆಗೆ ನಡೆಯಲಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ