ಮಂಗಳೂರು : SKSSF ವಿಖಾಯ ರಕ್ತದಾನಿ ಬಳಗ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಜಿಲ್ಲೆಯಾದ್ಯಂತ ರಕ್ತದಾನ ಅಭಿಯಾನ ಆಗಸ್ಟ್ 19 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿದೆ. ಸುಮಾರು 12 ವಲಯಗಳಲ್ಲಿ ಹಾಗೂ 20 ಕ್ಕಿಂತ ಅಧಿಕ ರಕ್ತದಾನ ಕ್ಯಾಂಪ್ ಗಳು ನಡೆಯಲಿದ್ದು ತುರ್ತು ಸಂಧರ್ಭಗಳಲ್ಲಿ ಜಿಲ್ಲೆಯ ಎಲ್ಲಾ ಬ್ಲಡ್ ಬ್ಯಾಂಕುಗಳಲ್ಲಿ ಕೂಡ ವಿಖಾಯ ಕಾರ್ಯಕರ್ತರು ರಕ್ತದಾನ ಮಾಡಲಿದ್ದಾರೆ.
ರಕ್ತದಾನ ಅಭಿಯಾನದ ಉದ್ಘಾಟನಾ” ಕಾರ್ಯಕ್ರಮವು ಮಂಗಳೂರು ವಲಯ SKSSF ವಿಖಾಯ ರಕ್ತದಾನಿ ಬಳಗದ ನೇತೃತ್ವದಲ್ಲಿಆಗಸ್ಟ್ 19 ರಂದು ವಲಚ್ಚಿಲ್ ದರ್ಗಾ ಷರೀಫ್ ಸಭಾಂಗಣದಲ್ಲಿ ನಡೆಯಲಿದೆ. SKSSF ದ.ಕ ಜಿಲ್ಲಾದ್ಯಕ್ಷರಾದ ಅಮೀರ್ ತಂಙಳ್ ಕಿನ್ಯಾ ಕಾರ್ಯಕ್ರಮದಲ್ಲಿ ದುಅ ವನ್ನು ನೆರವೇರಿಸಲಿದ್ದಾರೆ ಕಾರ್ಯಕ್ರಮದ ಉದ್ಘಾಟನೆಯನ್ನು ವಳಚ್ಚಿಳ್ ಖತೀಬರಾದ ಕುಕ್ಕಿಲ ದಾರಿಮಿ ಉಸ್ತಾದರು ನಡೆಸಲಿದ್ದಾರೆ.ಎಸ್ಕೆಎಸ್ಸೆಸ್ಸೆಪ್ ಕರ್ನಾಟಕ ರಾಜ್ಯಾದ್ಯಕ್ಷರಾದ ಅನೀಸ್ ಕೌಸರಿ ಉಸ್ತಾದರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.
ಜಿಲ್ಲಾ ವಿಖಾಯ ಚೇರ್ಮೆನ್ ಇಸ್ಮಾಯಿಲ್ ತಂಙಳ್ ಮುಖ್ಯ ಅತಿಥಿಗಳಾಗಿ ಬಾಗವಹಿಸುವ ಈ ರಕ್ತದಾನ ಅಭಿಯಾನದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಖಾಯ ರಕ್ತದಾನಿ ಬಳಗದ ಉಸ್ತುವಾರಿ ತಾಜುದ್ದೀನ್ ಟರ್ಲಿ ಹಾಗೂ ಮಂಗಳೂರು ವಲಯ ಉಸ್ತುವಾರಿ ನಝೀರ್ ವಲಚ್ಚಿಲ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ