ಡಿ.ಜೆ ಹಳ್ಳಿ ಘರ್ಷಣೆ ಮತ್ತು ದಾಂದಲೆಯ ಕುರಿತಂತೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ IPS ಇವರನ್ನು ಶಿವಾಜಿ ನಗರ ಶಾಸಕ ರಿಝ್ವಾನ್ ಹರ್ಷದ್ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ ಬಾವಾರವರು ಬೇಟಿಯಾಗಿ ಚರ್ಚಿಸಿದರು.
ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ, ಅಮಾಯಕರನ್ನು ಬಂಧಿಸದಿರಿ ಹಾಗೇ ಈಗಾಗಲೇ ಬಂಧಿಸಿರುವ ಅಮಾಯಕರನ್ನು ಬಿಡುಗಡೆಗೊಳಿಸಲು ಕಮಿಷನರ್ ಅವರಲ್ಲಿ ಕೇಳಿಕೊಳ್ಳಲಾಯಿತು. ನಡೆದ ಘಟನೆಗೆ ಕಾರಣ ಮತ್ತು ಅನಂತರದ ದಾಂದಲೆಯನ್ನು ಖಂಡಿಸುತ್ತೇವೆ ಎಂದ ಜಿ. ಎ ಬಾವಾ, ಅಮಾಯಕರ ಬಂಧನದ ಮಾಹಿತಿಯನ್ನು ನೀಡಿದರು.
ಗಲಭೆ ಮಾಡಿದವರನ್ನು ಬಂಧಿಸಿ, ಅದಕ್ಕೆ ಪ್ರಚೋದನೆ ಕೊಟ್ಟವರನ್ನೂ ಕಠಿಣ ಕಾನೂನಿನಲ್ಲಿ ಶಿಕ್ಷಿಸಿ ಹಾಗೇ ಮೊದಲು ಕೇಸು ದಾಖಲಿಸಲು ಹೋದಾಗ, ನಿರ್ಲ್ಯಕ್ಷ್ಯವಹಿಸಿದ ಪೊಲೀಸರನ್ನೂ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸಲಾಯಿತು. ಈಗಾಗಲೇ ಬಂಧಿಸಿರುವವರಲ್ಲಿ ನಿರಪರಾಧಿಗಳಿದ್ದರೆ ಯಾವ ಕಾರಣಕ್ಕೂ ಶಿಕ್ಷಿಸುವುದಿಲ್ಲ. ಇವತ್ತೇ ಆ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಅಧಿಕಾರಿಗಳನ್ನು ಕರೆಸಿ ಪೊಲೀಸ್ ಕಮಿಷನರ್ ಮಾತು ಕೊಟ್ಟರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ