ಮಂಗಳೂರು ಅ 22.ಜಿಲ್ಲೆಯ ಹಲವು ಕಡೆ ಸಮಾಜದ್ರೋಹಿ ಶಕ್ತಿಗಳು ಕೋಮು ಪ್ರಚೋದಕ ಕುತಂತ್ರಗಳನ್ನು ನಿರಂತರವಾಗಿ ಮಾಡುತ್ತಿದ್ದು ಕೂಡಲೇ ಜಿಲ್ಲಾಡಳಿತವು ಸೂಕ್ತ ವಾದ ಕಾನೂನು ಕ್ರಮಗಳ ಮೂಲಕ ವಿಧ್ವಂಸಕ ಶಕ್ತಿ ಗಳನ್ನು ಮಟ್ಟಹಾಕಬೇಕೆಂದು ಜಿಲ್ಲಾ ಮುಸ್ಲಿಂ ಲೀಗ್ ಅಧ್ಯಕ್ಷರಾದ ಕೆ ಪಿ ಅಬ್ದುಲ್ ರಹಮಾನ್ ತಬೂಕು ದಾರಿಮಿ ಕರೆ ನೀಡಿದರು.
ಕಳೆದ ವಾರ ಶ್ರಂಗೇರಿಯಲ್ಲಿ ಇದೇ ತರದ ಕೃತ್ಯ ನಡೆದಿದ್ದು ಪೋಲೀಸ್ ಇಲಾಖೆಯು ಸೂಕ್ತ ರೀತಿಯಲ್ಲಿ ಕಾನೂನು ಕೈಗೊಂಡ ಕಾರಣ ಸಂಭವಿಸಬಹುದಾದ ಅನಾಹುತವನ್ನು ತಡೆದಿದ್ದು ಶ್ಲಾಘನೀಯ ಎಂದು ಅವರು ಹೇಳುವುದರ ಜೊತೆಗೆ ಮಂಗಳೂರಿನ ಕೃತ್ಯವನ್ನು ಬಲವಾಗಿ ಖಂಡಿಸಿರುತ್ತಾರೆ.
ಮಂಗಳೂರಿನ ಹೃದಯ ಭಾಗದಲ್ಲಿರುವ ಅಲ್ಪಸಂಖ್ಯಾತರ ಭವನವನ್ನು ಮೊನ್ನೆ ಹಾಳುಗೆಡವಿದ ಸಮಾಜದ್ರೋಹಿಗಳು ಇಂದು ಪಂಪ್ ವೆಲ್ ನಲ್ಲಿರುವ ಪ್ರತಿಷ್ಠಿತ ತಖ್ವಾ ಮಸೀದಿಗೆ ಬಾಟಲಿಗಳನ್ನು ಎಸೆದು ದಾಂಧಲೆ ಮಾಡಿದ್ದು ಕೋಮುಪ್ರಚೋದಕ ಕೃತ್ಯಗಳಲ್ಲಿ ತೊಡಗಿರುತ್ತಾರೆ. ಇಂತಹ ನೀಚ ಕೃತ್ಯಗಳನ್ನು ಕಾನೂನಾತ್ಮಕ ಸೂಕ್ತ ಕ್ರಮಗಳ ಮೂಲಕ ಕೂಡಲೇ ಮಟ್ಟ ಹಾಕಿ ಜಿಲ್ಲೆಯ ಸ್ವಾಸ್ಥ್ಯ ಕಾಪಾಡಬೇಕೆಂದು ಪತ್ರಿಕಾ ಹೇಳಿಕೆಯಲ್ಲಿ ತಬೂಕು ದಾರಿಮಿ ಜಿಲ್ಲಾಡಳಿತ ಮತ್ತು ಸರಕಾರವನ್ನು ಒತ್ತಾಯಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್