janadhvani

Kannada Online News Paper

ಕೊರೊನಾ: ಉಚಿತ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಡಿವೈಎಫ್ಐ ಭಿತ್ತಿಪತ್ರ ಪ್ರದರ್ಶನ

ಮುಡಿಪು (ಆ 24): ಸರಕಾರಿ ಆಸ್ಪತ್ರೆ ಬಲಪಡಿಸಲು, ಖಾಸಗೀ ಆಸ್ಪತ್ರೆ ‌ನಿಯಂತ್ರಿಸಲು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಹಾಗು ಕೊರೋನಾ ಹೆಸರಲ್ಲಿ ಆಸ್ಪತ್ರೆಗಳ ಲೂಟಿಕೋರ ನೀತಿಯನ್ನು ಖಂಡಿಸಿ, ಸರಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ವಿರೋಧಿಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬಲಪಡಿಸುವಂತೆ ಒತ್ತಾಯಿಸಿ, ಎಲ್ಲರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗಾಗಿ ಒತ್ತಾಯಿಸಿ ಇಂದು ಡಿವೈಎಫ್ಐ ಮೊಂಟೆಪದವು ಹಾಗೂ ಕೊಲ್ಲರಕೋಡಿ ಘಟಕಗಳ ನೇತೃತ್ವದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಕಚೇರಿ ಎದುರು ಇಂದು ಭಿತ್ತಿಪತ್ರ ಪ್ರದರ್ಶನ ನಡೆಸಿ ಮನವಿ ಸಲ್ಲಿಸಲಾಯಿತು.

ಸಭೆಯನ್ನುದ್ದೇಶಿಸಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ಅಧ್ಯಕ್ಷ ಅಶ್ರಫ್ ಕೆಸಿ ರೋಡ್ ಮಾತನಾಡಿದರು. ಸಭೆಯಲ್ಲಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಉಪಾಧ್ಯಕ್ಷ ರಝಾಕ್ ಮೊಂಟೆಪದವು, ಎಸ್.ಎಫ್.ಐ ಜಿಲ್ಲಾ ಉಪಾಧ್ಯಕ್ಷ ಶಮಾಸ್ ಕೆಸಿ ರೋಡ್ , ಡಿವೈಎಫ್ಐ ಮೊಂಟೆಪದವು ಘಟಕದ ಅಧ್ಯಕ್ಷ ಸಿರಾಜ್ ಬಿ.ಎಂ, ಕೊಲ್ಲರಕೋಡಿ ಘಟಕದ ಅಧ್ಯಕ್ಷ ಆಸಿಫ್ ಕೊಲ್ಲರಕೋಡಿ, ಶರೀಫ್ ವಿದ್ಯಾನಗರ, ಅಶ್ರಫ್ ಅಚ್ಚು ಸಾರ್ಥಬೈಲ್, ಹಿದಾಯತ್ ಮೊಂಟೆಪದವು,ಯೂಸುಫ್, ನಿಝಮ್, ಸಾಹಿಲ್, ನಾಸಿರ್ ಉಪಸ್ಥಿತರಿದ್ದರು.

error: Content is protected !! Not allowed copy content from janadhvani.com