ಬೆಂಗಳೂರು:ಕೊರೋನಾ ಸೋಂಕು ಹೆಚ್ಚಾಗುತ್ತಿರುವುದರ ನಡುವೆಯೂ ಸರ್ಕಾರ ಲಾಕ್ಡೌನ್ ನಿಯಮಾವಳಿಗಳನ್ನು ಹಂತಹಂತವಾಗಿ ಸಡಿಲಿಕೆ ಮಾಡುತ್ತಿದೆ. ಈ ಮೊದಲು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪ್ರಯಾಣ ಮಾಡುವವರು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರಬೇಕಿತ್ತು. ಇದೀಗ ಸರ್ಕಾರ ಆ ನಿಯಮವನ್ನು ಬದಲಿಸಿದ್ದು, ಕ್ವಾರಂಟೈನ್ ನಿಯಮ ತೆಗೆದುಹಾಕಿದೆ.
ಕೋವಿಡ್ ಸಂಬಂಧಿತವಾಗಿ ರಾಜ್ಯ ಸರ್ಕಾರ ಹೇರಿದ್ದ ಎಲ್ಲಾ ನಿಯಮಗಳು ರದ್ದು ಮಾಡಿದೆ. ಈ ಮೊದಲು ಸೇವಾ ಸಿಂಧು ಪೋರ್ಟಲ್ನಲ್ಲಿ ಅಂತಾರಾಜ್ಯ ಪ್ರಯಾಣಕ್ಕೆ ನೋಂದಣಿ ಮಾಡಿಸಿಕೊಳ್ಳಬೇಕಿತ್ತು. ಗಡಿಯಲ್ಲಿ ಆರೋಗ್ಯ ತಪಾಸಣೆ, ಕ್ವಾರಂಟೈನ್ ನಿಯಮಗಳನ್ನು ಹೇರಲಾಗಿತ್ತು. ಇದೀಗ ಆ ಯಾವ ನಿಯಮ ಇರುವುದಿಲ್ಲ.
ದೇಶದ ಯಾವುದೇ ಮೂಲೆಯಿಂದ ರಾಜ್ಯಕ್ಕೆ ಜನ ಮತ್ತು ಸರಕು ಬರಲು ಅನುಮತಿ ಕಡ್ಡಾಯವಾಗಿತ್ತು. ಜನರು ಆಗಮಿಸುವಾಗ ಕೋವಿಡ್ ಸಂಬಂಧಿತ ರೋಗಲಕ್ಷಣ ಇದ್ದರೆ ಜನ ತಾವಾಗಿಯೇ ಪ್ರತ್ಯೇಕವಾಗಿ ಇದ್ದು ಆರೋಗ್ಯ ಇಲಾಖೆಯ ಸಹಾಯವಾಣಿಗೆ ಕರೆ ಮಾಡಬೇಕಿತ್ತು. ಆದಾಗ್ಯೂ ಜನರೇ ಬಂದರೆ 14 ದಿನಗಳವರೆಗೆ ತಮ್ಮ ಆರೋಗ್ಯದ ಮೇಲೆ ನಿಗಾ ಇರಿಸಲು ಸೂಚನೆ ನೀಡಲಾಗಿತ್ತು. ಈಗ ಎಲ್ಲಾ ನಿಯಮಗಳನ್ನು ತೆರವುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ