janadhvani

Kannada Online News Paper

“ಮುಸ್ಲಿಮರನ್ನು ಬಾಂಬ್ ಸಿಡಿಸಿ ಸಾಯಿಸಬೇಕು” ಪೋಸ್ಟ್ ಹಾಕಿದಾತನ ಬಂಧನ

ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್ ಮಾಡಿದ ವ್ಯಕ್ತಿಯನ್ನು ಪೊಲೀಸರು ಆಗಸ್ಟ್ 24 ರ ಸೋಮವಾರ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಬಂಧಿತ ಆರೋಪಿ ಬಾರ್ಯ ಪುತ್ತಿಲ ಗ್ರಾಮದ ರಘುರಾಮು ಶೆಟ್ಟಿ ಎಂದು ಗುರುತಿಸಿದ್ದು ಸಂಬಂಧಿಯೊಬ್ಬರ ನಿವಾಸದಲ್ಲಿ ಆರೋಪಿ ಆಶ್ರಯ ಪಡೆದಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ ಪಡೆದ ಬೆಳ್ತಂಗಡಿ ಪೋಲೀಸರು ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ ಜಿ, ನೇತೃತ್ವದಲ್ಲಿ ಅಲ್ಲಿಗೆ ತೆರಳಿ ಬಂದ್ಜಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಪೂಜೆಯ ಸಂದರ್ಭದಲ್ಲಿ ಆಗಸ್ಟ್ 5 ರಂದು ರಘುರಾಮು ಶೆಟ್ಟಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾನೆ ಮತ್ತು ಪಟಾಕಿಗಳನ್ನು ಸಿಡಿಸಿದ್ದಾನೆ ಎಂದು ಆರೋಪಿಸಿ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ನಂತರ, ಆತ ವಾಟ್ಸಪ್ ನಲ್ಲಿ ಪೋಸ್ಟ್ ಮಾಡಿದ್ದು, ಯಾರೂ ತನಗೆ ಏನೂ ಮಾಡಲಾರರು ಎಂದು ಹೇಳಿಕೊಂಡ ಶೆಟ್ಟಿ ಬೇರೊಂದು ಸಮುದಾಯದವರನ್ನು ಬಾಂಬ್ ಸಿಡಿಸಿ ನಾಶಗೊಳಿಸಬೇಕು ಎಂದು ಪೋಸ್ಟ್ ಹಾಕಿದ್ದ. ಈ ಸಂದೇಶದ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲಾಗಿತ್ತು.

error: Content is protected !! Not allowed copy content from janadhvani.com