ರಿಯಾದ್ | ವಿವಿಧ ಕಾರಣಗಳಿಗಾಗಿ ಸೌದಿ ಅರೇಬಿಯಾದ ಗಡೀಪಾರು ಕೇಂದ್ರದಲ್ಲಿ ಬಂಧನಕ್ಕೊಳಗಾಗಿದ್ದ ಮಲಯಾಳಿಗಳು ಸೇರಿದಂತೆ ಭಾರತೀಯರು ಬಿಡುಗಡೆ ಹೊಂದಿ ಈ ವಾರ ಮನೆ ಸೇರಲಿದ್ದಾರೆ. ಸೌದಿ ಸರ್ಕಾರದ ಕರುಣೆಯಿಂದ ಸುಮಾರು 800 ಭಾರತೀಯರನ್ನು ಬಿಡುಗಡೆ ಮಾಡಲಾಗುತ್ತಿದೆ.
ಕೋವಿಡ್ ವ್ಯಾಪಕಗೊಂಡ ಹಿನ್ನೆಲೆಯಲ್ಲಿ, ಹೇಗಾದರೂ ಮನೆ ಸೇರಬೇಕು ಎಂಬ ಇರಾದೆಯಿಂದ ಹಲವು ಬಾಗಿಲುಗಳನ್ನು ತಟ್ಟಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಸಂಬಂಧಿಕರು ಮತ್ತು ಸ್ನೇಹಿತರು ಈ ವಿಷಯವನ್ನು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ. ಪಿ. ಅಬೂಬಕರ್ ಮುಸ್ಲಿಯಾರ್ ಅವರ ಗಮನಕ್ಕೆ ತಂದ ನಂತರ ಅವರು ಮಧ್ಯಪ್ರವೇಶಿಸಿದರು.
ತ್ವರಿತ ಪರಿಹಾರಕ್ಕಾಗಿ ಸೌದಿ ಅರೇಬಿಯಾದ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿ, ಸೌದಿ ಅರೇಬಿಯನ್ ಸರ್ಕಾರದ ಪ್ರತಿನಿಧಿಗಳನ್ನು ಸಹ ಸಂಪರ್ಕಿಸಿದರು.ಇದರ ಫಲವಾಗಿ ಇದೀಗ 800 ಭಾರತೀಯರಿಗೆ ಬಿಡುಗಡೆ ಭಾಗ್ಯ ಲಭಿಸಿದೆ.
ಅವರು ಚೆನ್ನೈ, ವಿಶಾಖಪಟ್ಟಣಂ ಮತ್ತು ಕೊಚ್ಚಿ ವಿಮಾನ ನಿಲ್ದಾಣಗಳಿಗೆ ಆಗಮಿಸಲಿದ್ದಾರೆ. ಭಾರತದಲ್ಲಿ ಕ್ವಾರಂಟೈನ್ ಸೌಲಭ್ಯವನ್ನು ದೃಢೀಕರಿಸಿದ ನಂತರವೇ ಅವರನ್ನು ಸೌದಿಯಿಂದ ವಾಪಸ್ ಕಳುಹಿಸಲಾಗುತ್ತದೆ. ಜೈಲಿನಲ್ಲಿ ಸೌದಿ ಅಧಿಕಾರಿಗಳು ಗೌರವದಿಂದ ವರ್ತಿಸಿದ್ದರು, ಮನೆಗೆ ಮರಳುವುದು ತುಂಬಾ ಸಮಾಧಾನಕರವಾಗಿದೆ ಎಂದು ಬಂಧಿತರು ಹೇಳುತ್ತಾರೆ.
ಈ ಬಗ್ಗೆ ಮಧ್ಯಪ್ರವೇಶಿಸಿದ ವಿಷಯ ಸಂಬಂಧಿಸಿದಂತೆ ಕಾಂತಪುರಂ ಉಸ್ತಾದರು ಕೇಂದ್ರ ವಿದೇಶಾಂಗ ಸಚಿವರಿಗೆ ಪತ್ರ ಬರೆದಿದ್ದಾರೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ