ಎಸ್ಸೆಸ್ಸೆಫ್ ಮಧ್ಯನಡ್ಕ ಶಾಖೆಯ ವತಿಯಿಂದ ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ನೋಂದಣಿ ಕಾರ್ಯಕ್ರಮ ಮಧ್ಯನಡ್ಕ ತ್ವಾಹ ಜಮಾ ಮಸ್ಜಿದ್ ವಠಾರದಲ್ಲಿ ಜಮಾಅತ್ ಅಧ್ಯಕ್ಷರಾದ ಎಂ ಅಬೂಬಕ್ಕರ್ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಸೀದಿಯ ಖತೀಬ್ ಉಸ್ತಾದ್ ಕೆ ಬಿ ಅಬ್ದುರ್ರಹ್ಮಾನ್ ಮದನಿಯವರು ದುವಾರ್ಶಿವಚನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಮಾಅತ್ ಜೊತೆ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಮಾಸ್ಟರ್ ಸ್ವಾಗತಿಸಿದರು. ಮುಡಿಪು ಸೆಕ್ಟರ್ ಅಧ್ಯಕ್ಷರಾದ ಹುಸೈನ್ ಸಖಾಫಿ ಉಸ್ತಾದರು ಆಯುಷ್ಮಾನ್ ಕಾರ್ಡಿನ ಅನಿವಾರ್ಯತೆ ಮತ್ತು ಯೋಜನೆ ಬಗ್ಗೆ ತಿಳಿಸಿದರು.

ಶಾಖಾ ಅಧ್ಯಕ್ಷರಾದ ಫಯಾಜ್ ಎಂ, ಎಚ್ ಐ ಮದ್ರಸದ ಅಧ್ಯಾಪಕರಾದ ಸಿದ್ದೀಕ್ ಸಅದಿ, ಜಮಾಅತ್ ಕೋಶಾಧಿಕಾರಿ ಇಸ್ಮಾಯೀಲ್ ಎಂ, ಮಧ್ಯನಡ್ಕ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಇಬ್ರಾಹಿಂ ಎಂ, ಸುಲ್ತಾನ್ ಫ್ರೆಂಡ್ಸ್ ಅಧ್ಯಕ್ಷರಾದ ಅಶ್ರಫ್ ಎಂ ಕೆ, ಜಮಾಅತ್ ಉಪಾಧ್ಯಕ್ಷರಾದ ಹಸೈನಾರ್ ಸೀಗೆ, ಹಿರಿಯ ಸದಸ್ಯರಾದ ಇಬ್ರಾಹಿಂ ಸೀಗೆ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಜವಾಝ್ ಎಂ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಊರಿನ ಸರ್ವ ಧರ್ಮಗಳ ಸುಮಾರು 150ಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದ ಪ್ರಯೋಜನ ಪಡೆದರು.
✍️ಆಸಿಫ್ ಕೆ ಎಂ ಮಧ್ಯನಡ್ಕ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ