ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ವಿಸ್ಡಂ ಹಾಗೂ ಕ್ಯಾಂಪಸ್ ಟೀಮ್ ನಿಂದ ಸೆಪ್ಟಂಬರ್ 14,15 ಹಾಗೂ 16 ದಿನಾಂಕಗಳಲ್ಲಿ ನಡೆಯುವ ಕೋವಿಡೋತ್ತರ ಮಾಹಿತಿ ಕಾರ್ಯಾಗಾರದ ಉದ್ಘಾಟನೆಯು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಉಮ್ಮರ್ ಅಸ್ಸಖಾಫ್ ತಂಙಳ್ ಮದನಿರವರ ಅಧ್ಯಕ್ಷತೆಯಲ್ಲಿ ಸೆಪ್ಟಂಬರ್ 14 ಸೋಮವಾರ ರಾತ್ರಿ 8:30 ಗಂಟೆಗೆ ರಾಜ್ಯ ಎಸ್ಸೆಸ್ಸೆಫ್ ನ ಅಧಿಕೃತ ಯೂಟೂಬ್ ಚಾನಲ್ ನಲ್ಲಿ ನಡೆಯಲಿರುವುದು.
ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಸಖಾಫಿ ಕಾಮಿಲ್ ರವರು ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕ್ಯಾಂಪಸ್ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಘೋಷಣೆಯನ್ನು ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ಮಾಸ್ಟರ್ ಬೆಂಗಳೂರು ಮಾಡಲಿದ್ದಾರೆ.
ಸೆಪ್ಟಂಬರ್ 14,15 ಹಾಗೂ 16 ದಿನಾಂಕ ನಡೆಯುವ ಕೋವಿಡೋತ್ತರ ಮಾಹಿತಿ ಕಾರ್ಯಾಗಾರದಲ್ಲಿ ಅಬ್ದುರ್ರಝಾಕ್ ಸರ್ ಅನಂತಾಡಿ,ಡಾ ಸರ್ಫ್ರಾಝ್ ಜೆ ಹಾಸಿಂ ಹಾಗೂ ಹೈದರ್ ಮರ್ಧಾಳ ರವರು ಎಜ್ಯುಕೇಶನ್,ಸೈಕೋಲಜಿ ಹಾಗೂ ಹೆಲ್ತ್ ಮೊದಲಾದ ವಿಷಯಗಳಲ್ಲಿ ಮಾಹಿತಿಯನ್ನು ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸುಪ್ರೀಂ ಕೌನ್ಸಿಲ್ ಕನ್ವೀನರ್ ಎಂ.ಬಿ.ಎಂ ಸಾದಿಕ್ ಮಾಸ್ಟರ್ ಮಲೆಬೆಟ್ಟು, ನಾಯಕರಾದ ಹಮೀದ್ ಬಜ್ಪೆ,ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ, ಕೋಶಾಧಿಕಾರಿ ರವೂಫ್ ಖಾನ್,ಡೆಪ್ಯುಟಿ ಪ್ರಸಿಡೆಂಟ್ ಹಝ್ರತ್ ಗುಲಾಮುದ್ದೀನ್ ನೂರಿ,ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ, ಕಾರ್ಯದರ್ಶಿಗಳಾದ ಹಾಫಿಳ್ ಯಾಕೂಬ್ ಸಅದಿ ನಾವೂರು, ಕೆ.ಎಂ ಮುಸ್ತಫಾ ನಈಮಿ, ಸಿರಾಜುದ್ದೀನ್ ಸಖಾಫಿ ಕನ್ಯಾನ,ಅಶ್ರಫ್ ರಝಾ ಅಂಜದಿ,ಹುಸೈನ್ ಸಅದಿ ಹೊಸ್ಮಾರ್,ರಾಜ್ಯ ಕ್ಯಾಂಪಸ್ ಹಾಗೂ ವಿಸ್ಡಂ ಟೀಂನ ನಾಯಕರಾದ ಸಫ್ವಾನ್ ಚಿಕ್ಕಮಂಗಳೂರು,ಶರೀಫ್ ಕೊಡಗು ಹಾಗೂ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ