ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಅಂತಾರಾಷ್ಟ್ರೀಯ ಸಮಿತಿ ವತಿಯಿಂದ “Resurgence-20″ ಕಾರ್ಯಕ್ರಮವು ಸೆ.18 ರಂದು Zoom App ನಲ್ಲಿ ನಡೆಯಲಿದೆ.
ಭಾರತೀಯ ಕಾಲಮಾನ ರಾತ್ರಿ 9.30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೇರಳ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಬದ್ರುಸ್ಸಾದಾತ್ ಅಸ್ಸಯ್ಯಿದ್ ಇಬ್ರಾಹೀಮುಲ್ ಖಲೀಲ್ ಅಲ್-ಬುಖಾರಿ ತಂಙಳ್ ರವರು ಉಪನ್ಯಾಸ ನೀಡಲಿದ್ದಾರೆ.
ಕೊಡಗು ಜಿಲ್ಲಾ ಸಹಾಯಕ ಖಾಝಿಯವರಾದ ಬಹು| ಕೆ.ಎ.ಮಹ್ಮೂದ್ ಮುಸ್ಲಿಯಾರ್ ಎಡಪ್ಪಾಲ ಇವರ ದುಆದೊಂದಿಗೆ ಆರಂಭಗೊಳ್ಳಲಿರುವ ಕಾರ್ಯಕ್ರಮವನ್ನು ಕರ್ನಾಟಕ ಜಮ್ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಬಹು| ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದರು ಉದ್ಘಾಟಿಸಲಿದ್ದಾರೆ.

ಕೋವಿಡ್ ಕಾಲದಲ್ಲಿ ಹಲವರ ಕೆಲಸಗಳು ನಷ್ಟವಾಗಿದ್ದು, ಇನ್ನು ಕೆಲವರು ಆರ್ಥಿಕವಾಗಿ ಬಹುದೊಡ್ಡ ನಷ್ಟದಲ್ಲಿದ್ದಾರೆ. ಈ ಸಂದಿಗ್ಧ ಪರಿಸ್ಥಿತಿಯನ್ನು ನಿಭಾಯಿಸಲು ಉಲಮಾ ನಾಯಕರ ಸಲಹೆಗಳು ಬಹಳಷ್ಟು ಉಪಕಾರಿಯಾಗಲಿದೆ.
ಧಾರ್ಮಿಕ ನೈತಿಕತೆ ಹಾಗೂ ಆಧ್ಯಾತ್ಮಿಕ ಮರೀಚಿಕೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಸ್ಥ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆದ್ದರಿಂದ ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕಾರ್ಯಕ್ರಮದ ಕನ್ವೀನರ್ ರಹೀಮ್ ಸಅದಿ ಖತರ್ ಹಾಗೂ ಇಕ್ಬಾಲ್ ಬರಕ ಒಮಾನ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ