ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಅಂತಾರಾಷ್ಟ್ರೀಯ ಸಮಿತಿ ವತಿಯಿಂದ “Resurgence-20″ ಕಾರ್ಯಕ್ರಮವು ಸೆ.18 ರಂದು Zoom App ನಲ್ಲಿ ನಡೆಯಲಿದೆ.
ಭಾರತೀಯ ಕಾಲಮಾನ ರಾತ್ರಿ 9.30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೇರಳ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಬದ್ರುಸ್ಸಾದಾತ್ ಅಸ್ಸಯ್ಯಿದ್ ಇಬ್ರಾಹೀಮುಲ್ ಖಲೀಲ್ ಅಲ್-ಬುಖಾರಿ ತಂಙಳ್ ರವರು ಉಪನ್ಯಾಸ ನೀಡಲಿದ್ದಾರೆ.
ಕೊಡಗು ಜಿಲ್ಲಾ ಸಹಾಯಕ ಖಾಝಿಯವರಾದ ಬಹು| ಕೆ.ಎ.ಮಹ್ಮೂದ್ ಮುಸ್ಲಿಯಾರ್ ಎಡಪ್ಪಾಲ ಇವರ ದುಆದೊಂದಿಗೆ ಆರಂಭಗೊಳ್ಳಲಿರುವ ಕಾರ್ಯಕ್ರಮವನ್ನು ಕರ್ನಾಟಕ ಜಮ್ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಬಹು| ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದರು ಉದ್ಘಾಟಿಸಲಿದ್ದಾರೆ.

ಕೋವಿಡ್ ಕಾಲದಲ್ಲಿ ಹಲವರ ಕೆಲಸಗಳು ನಷ್ಟವಾಗಿದ್ದು, ಇನ್ನು ಕೆಲವರು ಆರ್ಥಿಕವಾಗಿ ಬಹುದೊಡ್ಡ ನಷ್ಟದಲ್ಲಿದ್ದಾರೆ. ಈ ಸಂದಿಗ್ಧ ಪರಿಸ್ಥಿತಿಯನ್ನು ನಿಭಾಯಿಸಲು ಉಲಮಾ ನಾಯಕರ ಸಲಹೆಗಳು ಬಹಳಷ್ಟು ಉಪಕಾರಿಯಾಗಲಿದೆ.
ಧಾರ್ಮಿಕ ನೈತಿಕತೆ ಹಾಗೂ ಆಧ್ಯಾತ್ಮಿಕ ಮರೀಚಿಕೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಸ್ಥ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆದ್ದರಿಂದ ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕಾರ್ಯಕ್ರಮದ ಕನ್ವೀನರ್ ರಹೀಮ್ ಸಅದಿ ಖತರ್ ಹಾಗೂ ಇಕ್ಬಾಲ್ ಬರಕ ಒಮಾನ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ