ಪುತ್ತೂರು : ರಕ್ತದಾನ ಎಂದರೆ ಜೀವದಾನವೇ ಸರಿ, ರಕ್ತದಾನ ಮಾಡುವ ಮೂಲಕ ಇನ್ನೊಬ್ಬರಿಗೆ ಜೀವರಕ್ಷಣೆ ಹಾಗೂ ಬದುಕನ್ನು ಎಸ್ಸೆಸ್ಸೆಫ್ ಕೊಡುತ್ತಿದೆ, ಇದು ಇಡೀ ರಾಜ್ಯಕ್ಕೆ ಹಾಗೂ ಯುವ ಸಂಘಟನೆಗಳಿಗೆ ಮಾದರಿಯಾಗಿದೆ, ಎಸ್ಸೆಸ್ಸೆಫ್ಫ್ ಬ್ಲಡ್ ಸೈಬೋ ಇದರ ಯೋಜಿತ 200 ನೇ ಬ್ಲಡ್ ಕ್ಯಾಂಪ್ ನಮ್ಮ ಅವಧಿಯಲ್ಲೇ ನಡೆಯಲಿ ಎಂದು ಪುತ್ತೂರು ವಿಧಾನಸಭಾ ಶಾಸಕ ಶ್ರೀ ಸಂಜೀವ ಮಠಂದೂರು ಅಭಿಪ್ರಾಯಪಟ್ಟರು.

ಅವರು ದಿನಾಂಕ 13/09/20 ರಂದು ಎಸ್ಸೆಸ್ಸೆಫ್ಫ್ ಉಪ್ಪಿನಂಗಡಿ ಸೆಕ್ಟರ್ ವತಿಯಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಸಹಯೋಗದಲ್ಲಿ ಎಸ್ಸೆಸ್ಸೆಫ್ ದ.ಕ ಬ್ಲಡ್ ಸೈಬೋ ಇದರ 181 ರಕ್ತದಾನ ಶಿಬಿರವನ್ನು ಉಧ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ಸೆಸ್ಸೆಫ್ ಕೋಶಾಧಿಕಾರಿ ಅಲೀ ತುರ್ಕಳಿಕ್ಕೆ ಪ್ರಸ್ತಾವಿಕವಾಗಿ ಮಾತನಾಡಿ ಪ್ರಸ್ತುತ ರಕ್ತದ ಅವಶ್ಯಕತೆ ಹಾಗೂ ಎಸ್ಸೆಸ್ಸೆಫ್ ತುರ್ತು ಸೇವೆಯನ್ನು ವಿವರಿಸಿದರು. ಹಾರಿಸ್ ಸಖಾಫಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್ ಸಾದಾತ್ ತಂಙಳ್ ಕರುವೇಲು, ಮುಹಮ್ಮದ್ ಮಿಸ್ಬಾಹಿ,ಇಸಾಕ್ ಮದನಿ, ಹಮೀದ್ ಕರುವೇಲು, ಮುಸ್ತಫಾ ಯು.ಪಿ, ಹಕೀಂ ಕಳಂಜಿಬೈಲು, ಸಿರಾಜ್ ಆತೂರು ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎಂ.ಎಂ ಮಹ್ ರೂಫ್ ಆತೂರು ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ