janadhvani

Kannada Online News Paper

ಬೇಕಲ್ ಉಸ್ತಾದರ ಚೇತರಿಕೆಗಾಗಿ ವಿಶೇಷ ಪ್ರಾರ್ಥನೆ ನಡೆಸಲು ಮನವಿ

ಮಂಗಳೂರು: ಹಿರಿಯ ವಿದ್ವಾಂಸ, ಸುನ್ನೀ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ, ಉಡುಪಿ ಚಿಕ್ಕಮಗಳೂರು ಹಾಸನ ಶಿವಮೊಗ್ಗ ಜಿಲ್ಲೆಗಳ ಸಯುಕ್ತ ಖಾಝಿ ತಾಜುಲ್ ಫುಖಹಾಅ್ ಪಿ ಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಉಸ್ತಾದ್ ಅವರು ತೀವ್ರ ಅನಾರೋಗ್ಯದಿಂದ ಚಿಕಿತ್ಸೆಯಲ್ಲಿದ್ದಾರೆ.

ಅವರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರ ಚೇತರಿಕೆಗಾಗಿ ಇಂದು ಜುಮಾ ಬಳಿಕ ಎಲ್ಲ ಮೊಹಲ್ಲಾಗಳಲ್ಲಿ ಪ್ರತ್ಯೇಕ ಪ್ರಾರ್ಥನೆ ನಡೆಸುವಂತೆ ಸುನ್ನೀ ಜಂಇಯತುಲ್ ಉಲಮಾ ರಾಜ್ಯ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಸುನ್ನೀ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್ ಪಿ ಹಂಝ ಸಖಾಫಿ ಮನವಿ ಮಾಡಿದ್ದಾರೆ.

ಉಸ್ತಾದರ ರೋಗ ಶಮನಕ್ಕಾಗಿ ಎಲ್ಲ ಸುನ್ನಿ ಸಂಘ-ಸಂಸ್ಥೆಗಳು ಪ್ರತ್ಯೇಕ ಪ್ರಾರ್ಥನಾ ಮಜ್ಲಿಸ್ ಗಳನ್ನು ಸಂಘಟಿಸಬೇಕು ಎಂದೂ ಅವರು ಕರೆ ನೀಡಿದ್ದಾರೆ.