ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ (SSF) ಇದರ ಸೂರಿಕುಮೇರು ಶಾಖೆಯ ಮಫಾಝ ಕ್ಯಾಂಪ್ ಸೆಪ್ಟೆಂಬರ್ 17 ಗುರುವಾರ ಯೂಸುಫ್ ಹಾಜಿಯವರ ದಾರುಲ್ ಬರಕದಲ್ಲಿ ನಡೆಯಿತು.ಎಸ್ಸೆಸ್ಸೆಫ್ ಸೂರಿಕುಮೇರು ಶಾಖೆಯ ಅಧ್ಯಕ್ಷ ಮುಬಶ್ಶಿರ್ ಮುಸ್ಲಿಯಾರ್ ರವರ ಅಧ್ಯಕ್ಷತೆಯಲ್ಲಿ ಪ್ರಧಾನ ಕಾರ್ಯದರ್ಶಿ ನೌಶಾದ್ ಉಮ್ಮರ್ ಸ್ವಾಗತಿಸಿದರು.
ಸಯ್ಯಿದ್ ಸಾಬಿತ್ ಸಖಾಫಿ ಅಲ್ ಮುಈನೀ ದುಆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು,ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಅಧ್ಯಕ್ಷ ಮಿತ್ತೂರು ಕೆಜಿಎನ್ ವಿದ್ಯಾಲಯದ ಅಧ್ಯಾಪಕರೂ ಆದ ಸ್ವಾದಿಖ್ ಸಖಾಫಿ ಅಲ್ ಮುಈನೀ ಗಡಿಯಾರ್ ಉಪಯುಕ್ತ ಮಾಹಿತಿಗಳನ್ನೊಳಗೊಂಡ
“ಮಫಾಝ”ತರಗತಿ ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಕಲಂದರ್ ಪಾಟ್ರಕೋಡಿ, ಮಾಜಿ ಪ್ರಧಾನ ಕಾರ್ಯದರ್ಶಿ ಸಲೀಂ ಮಾಣಿ,ಎಸ್ವೈಎಸ್ ಸೂರಿಕುಮೇರು ನಾಯಕರಾದ ಯೂಸುಫ್ ಹಾಜಿ,ಹನೀಫ್ ಸಂಕ,ಮುಂತಾದವರು ಉಪಸ್ಥಿತರಿದ್ದರು.
ಕೊನೆಯಲ್ಲಿ ಮುಈನುದ್ದೀನ್ ಮಾಣಿ,ಇಸಾಕ್ ಮಾಣಿ,ಜಮಾಲ್ ಮಾಣಿ,ಸವಾದ್ ಮಾಣಿ,ಸೈಫುಲ್ಲಾ ಮಾಣಿ, ಇಮ್ರಾನ್,ಜಾಬಿರ್,ಆಶಿಕ್ ಸೂರಿಕುಮೇರು ನೇತೃತ್ವದಲ್ಲಿ ಬುರ್ದಾ ಆಲಾಪನೆ ನಡೆಯಿತು.ಮುಈನುದ್ದೀನ್ ಮಾಣಿ ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ