ವಿಟ್ಲ: ಹೊಸ ವಿನ್ಯಾಸದೊಂದಿಗೆ ನಿರ್ಮಾಣಗೊಂಡ ಶತಮಾನದ ಇತಿಹಾಸ ಹೊಂದಿರುವ ಅಳಿಕೆ ಜುಮಾ ಮಸೀದಿಯ ನೂತನ ಮಸೀದಿ ಕಟ್ಟಡವು ಸೆ.18 ಶುಕ್ರವಾರ ಜುಮಾ ನಮಾಝಿನ ಮುಂಚಿತವಾಗಿ ಮಸೀದಿ ಗೌರವಾಧ್ಯಕ್ಷರಾದ ಸೈಯ್ಯದ್.ಪೂಕುಂಞ ತಂಙಳ್ ಉದ್ಯಾವರ ಅವರ ದಿವ್ಯ ಹಸ್ತದಿಂದ ಉದ್ಘಾಟನೆಗೊಂಡಿತು.
ಸೈಯ್ಯದ್.ಮೀರ್ ಝಾಯಿದ್ ಅಲ್ ಬುಖಾರಿ ತಂಙಳ್ ನಲ್ಕ ಇವರು ಮಸೀದಿ ಕಟ್ಟಡದ ವಕ್ಫ್ ಕಾರ್ಯಗಳನ್ನು ನೆರವೇರಿಸಿ ಮಸೀದಿಯನ್ನು ಪ್ರಾರ್ಥನಾ ಮುಕ್ತಗೊಳಿಸಿದರು.
ಈ ಸಂಧರ್ಭದಲ್ಲಿ ಅಲ್ ಹಾಜ್ ಮಹಮೂದುಲ್ ಫೈಝಿ ವಾಲೆಮುಂಡೋವು ಅವರು ಗೌರವ ಉಪಸ್ಥಿತರಿದ್ದರು.
ನೂತನ ಮಸೀದಿಯ ಮೊದಲ ಖುತುಬಾವನ್ನು ಮಸೀದಿ ಖತೀಬರಾದ ಬಹು.ಅಬ್ದುಲ್ ಖಾದರ್ ಸಖಾಫಿ ಅವರು ಪಾರಾಯಣಗೈದರು.
ಮಸೀದಿಯ ಮಾಜಿ ಖತೀಬರುಗಳಾದ ಎ.ಮ್.ಇಬ್ರಾಹಿಂ ಮುಸ್ಲಿಯಾರ್ ಅಳಿಕೆ, ಬಿ.ಎ ಇಬ್ರಾಹಿಂ ಮುಸ್ಲಿಯಾರ್ ಪರಿಯಾಲ್ತಡ್ಕ, ಮಹಮ್ಮದ್ ಮದನಿ ಇರ್ದೆ, ಅಬ್ದುಲ್ ರಝಾಕ್ ನಯೀಮಿ ದರ್ಬೆ, ಅಬ್ದುಲ್ ಖಾದರ್ ಫೈಝಿ ಕೊಡುಂಗಾಯಿ, ಅಬ್ದುಲ್ಲ ಝೈನಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ವಾರ್ತಾಧಿಕಾರಿ ಅಬ್ದುಲ್ ಖಾದರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್ ಅವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಈ ಸಂಧರ್ಭದಲ್ಲಿ ನೂತನ ಮಸೀದಿ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಬಿ.ಕೆ. ಅಬೂಬಕ್ಕರ್ ಹಾಜಿ ಬೈರಿಕಟ್ಟೆ ಹಾಗೂ ಸಮಿತಿಯ ಎಲ್ಲಾ ಸದಸ್ಯರನ್ನು ಮತ್ತು ಇಂಜಿನಿಯರ್ ಗಳಾದ ಸಿನಾನ್ ಅಳಿಕೆ, ಶಾಹಿಲ್ ಅಳಿಕೆ ಮತ್ತು ಅಲ್ತಾಫ್ ವಿಟ್ಲ ಅವರನ್ನು ಮಸೀದಿ ಗೌರವಾಧ್ಯಕ್ಷ ಸೈಯ್ಯದ್. ಪೂಕುಂಞ ತಂಙಳ್ ಉದ್ಯಾವರ ಅವರು ಸ್ಮರಣಿಕೆ ನೀಡಿ ಗೌರವಿಸಿದರು.
ಅಬ್ದುಲ್ ಸಲಾಮ್ ಮದನಿ ಅಳಿಕೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್