ಮಂಗಳೂರು: ಕರ್ನಾಟಕ ಕಂಡ ಅತ್ಯುತ್ತಮ ಪಂಡಿತ, ಹಿರಿಯ ಧಾರ್ಮಿಕ ವಿದ್ವಾಂಸ, ಜ್ಞಾನ ಜ್ಯೋತಿ, ಅರಿವಿನ ತೇಜಸ್ವು ,ನಾಲ್ಕು ಮದ್ಹಬುಗಳಲ್ಲಿ ಫತ್ವ ನೀಡಲು ಯೋಗ್ಯರಾಗಿದ್ದ ಪಿಕ್ಹ್ ಪಂಡಿತರೂ, ಜಾಮಿಆ ಸಅದಿಯಾ ಅರಬಿಯಾ ಶರೀಅತ್ ಕಾಲೇಜು, ಅಲ್ ಇಹ್ಸಾನ್ ಶರೀಅತ್ ಕಾಲೇಜು ಮೂಳೂರು ಇದರ ಪ್ರಾಂಶುಪಾಲರೂ, ಉಡುಪಿ, ಚಿಕ್ಕಮಂಗಳೂರು,ಹಾಸನ ಜಿಲ್ಲಾ ಸಂಯುಕ್ತ ಖಾಝಿಯೂ ಆಗಿದ್ದ ಬಹು| ಪಿ ಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಉಸ್ತಾದ್ ರ ವಿಯೋಗವು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.
ಉತ್ತಮ ಭಾಷಣಗಾರ, ಸಂಘಟನೆ ಚತುರರಾದ ಬೇಕಲ ಉಸ್ತಾದರು ಸರ್ವ ಧರ್ಮಿಯವರೊಂದಿಗೆ ಸೌಹಾರ್ದದತೆಯ ಹರಿಕಾರನಂತಿದ್ದರು.
ಸದಾ ನಗು ಮುಖದೊಂದಿಗಿದ್ದ ಉಸ್ತಾದರು ಎಲ್ಲರೊಂದಿಗೂ ಸರಳತೆಯೊಂದಿಗೆ ಮುಕ್ತವಾಗಿ ಬೆರೆಯುತ್ತಿದ್ದರು.ಅವರು ಸಾವಿರಾರು ಶಿಷ್ಯರನ್ನು ಹೊಂದಿದ್ದರು.ಉಸ್ತಾದರು ಹಲವಾರು ಜಮಾಅತ್ ಗಳ ಖಾಝಿಯೂ ಆಗಿದ್ದರು.
ಶ್ರೀಯುತರ ವಿಯೋಗವು ಸಹಿಸಲಾರದ ದುಃಖ ವನ್ನು ತಂದಿದೆ ಉಸ್ತಾದರ ಪರಲೋಕ ಜೀವನ ಸುಖದಾಯಕವಾಗಿರಲಿ ಎಂದು ಸಂತಾಪ ಸಂದೇಶ ದಲ್ಲಿ ಜಿಲ್ಲಾ ಮುಸ್ಲಿಂ ಲೀಗ್ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ದಾರಿಮಿ ತಬೂಕು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್