ಮಂಗಳೂರು: ಪ್ರಖಾಂಡ ವಿದ್ವಾಂಸರು, ಸಮಸ್ತ ಕೇಂದ್ರ ಮುಶಾವರ ಸದಸ್ಯರು, ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷರೂ ಆಗಿದ್ದ ಬಹು ತಾಜುಲ್ ಫುಖಹಾಅ್ ಬೇಕಲ್ ಉಸ್ತಾದರ ಸಂಸ್ಮರಣೆ ಕಾರ್ಯಕ್ರಮವು ಅ.3ರಂದು ಬೆಳಿಗ್ಗೆ 10 ಘಂಟೆಗೆ ನಡೆಯಲಿದೆ.
ಕರ್ನಾಟಕ ಜಂಇಯ್ಯತುಲ್ ಉಲಮಾ ಸಮಿತಿಯು ಮಂಗಳೂರಿನ ತಕ್ವಾ ಮಸೀದಿಯಲ್ಲಿ ನಡೆಸಲಿರುವ ಪ್ರಸ್ತುತ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಂಇಯ್ಯತುಲ್ ಉಲಮಾ ಮಂಗಳೂರು ಝೋನ್ ಅಧ್ಯಕ್ಷ ಬಶೀರ್ ಮದನಿ ಅಲ್ ಕಾಮಿಲ್, ಪ್ರಧಾನ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸಅದಿ ನಾವೂರು ಹೇಳಿಕೆಯಲ್ಲಿ ಕರೆ ನೀಡಿದ್ದಾರೆ.