janadhvani

Kannada Online News Paper

ಅ.4: ಮರಿಕ್ಕಳದಲ್ಲಿ ತಾಜುಲ್ ಫುಖಹಾಅ್ ಸಂಸ್ಮರಣೆ ಹಾಗೂ ಪ್ರಾರ್ಥನಾ ಸಂಗಮ

ಮೊಂಟೆಪದವು:ಮರಿಕ್ಕಳ ಜುಮಾ ಮಸ್ಜಿದ್ ನಲ್ಲಿ ಸುದೀರ್ಘ 38 ವರ್ಷಗಳ ಕಾಲ ಅಧ್ಯಕ್ಷರೂ,ಕಳೆದ 5 ವರ್ಷಗಳ ಕಾಲ ಖಾಝಿಯೂ ಆಗಿದ್ದ ತಾಜುಲ್ ಫುಖಾಹಾಅ್ ಶೈಖುನಾ ಬೇಕಲ್ ಉಸ್ತಾದ್ ಅನುಸ್ಮರಣೆ ಹಾಗೂ ಪ್ರಾರ್ಥನಾ ಸಂಗಮವು ಅಕ್ಟೋಬರ್ 4 ಆದಿತ್ಯವಾರ ಬೆಳಿಗ್ಗೆ 11:00 ಗಂಟೆಗೆ ಮರಿಕ್ಕಳದಲ್ಲಿ ನಡೆಯಲಿರುವುದು.

ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.

ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲೈಲ್ ತಂಙಳ್ ಕಾಜೂರು ಪ್ರಾರ್ಥನಾ ಸಂಗಮಕ್ಕೆ ನೇತೃತ್ವ ನೀಡಲಿದ್ದಾರೆ.

ಅಲ್ ಹಾಜ್ ಹುಸೈನ್ ಸಅದಿ ಕೆ.ಸಿ ರೋಡ್ ಅನುಸ್ಮರಣಾ ಭಾಷಣ ಮಾಡಲಿರುವರು.

ಮರಿಕ್ಕಳ ಜುಮಾ ಮಸ್ಜಿದ್ ಅಧ್ಯಕ್ಷರಾದ ಅಬ್ಬಾಸ್ ಕೊಡಂಚಲ್ ಅಧ್ಯಕ್ಷತೆಯನ್ನು ವಹಿಸಲಿರುವರು.

ಕಾರ್ಯಕ್ರಮದಲ್ಲಿ ಮಂಗಳೂರು ಶಾಸಕರಾದ ಯು.ಟಿ.ಖಾದರ್, ಮರಿಕ್ಕಳ ಜುಮಾ ಮಸ್ಜಿದ್ ಖತೀಬ್ ಅಬ್ಬಾಸ್ ಸಖಾಫಿ ಮಡಿಕೇರಿ,ಸದರ್ ಉಸ್ತಾದ್ ಝೈನುಲ್ ಆಬಿದ್ ಸಖಾಫಿ,ಜಬ್ಬಾರ್ ಸಅದಿ ಪೆರ್ನೆ ಹಾಗೂ ಧಾರ್ಮಿಕ ನಾಯಕರು,ಸಂಘಟನಾ ನಾಯಕರು,ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ ಎಂದು ಮರಿಕ್ಕಳ ಜುಮಾ ಮಸ್ಜಿದ್ ಪ್ರಧಾನ ಕಾರ್ಯದರ್ಶಿ ಎನ್.ಎಚ್ ಅಬ್ಬಾಸ್ ಚಂದಹಿತ್ತಿಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com