ಕೊಪ್ಪಳ : ಭವಿಷ್ಯದಲ್ಲಿ ಭಾರತವನ್ನು ಕಟ್ಟಬೇಕಾದ ಇಂದಿನ ವಿದ್ಯಾರ್ಥಿಗಳಿಗೆ ಅವರು ಸ್ಪರ್ಶಿಸುವ ಎಲ್ಲಾ ಮಜಲುಗಳಲ್ಲೂ ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರನ್ನು ಪರಿಚಯ ಮಾಡಿಕೊಡಬೇಕಾದ ಅನಿವಾರ್ಯತೆ ಇದೆ.
ಮಾದರೀ ಯೋಗ್ಯವಾದ ಚಳವಳಿಗಳ ಮೂಲಕ ನಾಡಿನ ಕಟ್ಟಕಡೆಯ ಪ್ರಜೆಗಳ ಬಗ್ಗೆಯೂ ಕಾಳಜಿ ಹೊಂದಿದ್ದ ಗಾಂದೀಜಿಯವರು ಮಾತ್ರವೇ ಭಾರತದ ರಾಷ್ಟ್ರಪಿತರಾಗಲು ಅರ್ಹರು ಆದ್ದರಿಂದ ಅವರನ್ನು ನೋಟುಗಳಿಗೆ ಅಥವಾ ಪೇಜುಗಳಿಗೆ ಮಾತ್ರ ಸೀಮಿತ ಗೊಳಿಸದೆ ಅವರ ಕನಸನ್ನು ನನಸು ಮಾಡುವಲ್ಲಿ ಸರ್ಕಾರಗಳು ಮುಂದೆ ಬರಬೇಕಾಗಿದೆ ಎಂದು ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ ತಿಳಿಸಿದರು.

‘ಗಾಂಧಿ ವಾಚನ ಭಾರತದ ಪುನಶ್ಚೇತನ’ ಎಂಬ ಘೋಷಣೆಯೊಂದಿಗೆ ಎಸ್ಸೆಸ್ಸೆಫ್ ರಾಷ್ಟ್ರದಾದ್ಯಂತ ಎಲ್ಲಾ ರಾಜ್ಯಗಳಲ್ಲಿ ನಡೆಸಿದ ಕಾರ್ಯಕ್ರಮ ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆಯಿತು.
ರಾಜ್ಯ ಡೆಪ್ಯುಟಿ ಅಧ್ಯಕ್ಷ ಮೌಲಾನಾ ಗುಲಾಂ ಹುಸೈನ್ ನೂರಿ ಅಧ್ಯಕ್ಷತೆ ವಹಿಸಿದರು. ಮಾಜಿ ನಗರಸಭಾ ಅಧ್ಯಕ್ಷ ಶಾಮಿದ್ ಮನಿಯಾರ್ ಸಭೆಯನ್ನು ಉದ್ಘಾಟಿಸಿದರು. ಉಮರುಲ್ ಫಾರೂಖ್ ಕೊಡಗು ಸಂದೇಶ ವಾಚಿಸಿದರು.
ಕರ್ನಾಟಕ ಮುಸ್ಲಿಂ ಜಮಾಅತ್ ಕೊಪ್ಪಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಯ್ಯಿದಲಿ ಸಾಹೇಬ್, ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಮೆಹಬೂಬ್ ಬಸಾಪಟ್ಟಣ, ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಮೌಲಾನಾ ನಝೀರ್ ಅಹ್ಮದ್, ಎಸ್ಸೆಸ್ಸೆಫ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಫಿಝ್ ಸಲೀಂ ಹಾಗೂ ಇಖ್ಬಾಲ್ ಮರ್ಝುಖಿ ಭಾಗವಹಿಸಿದರು.
ನೂರುದ್ದೀನ್ ರಝ್ವಿ ಕಾರ್ಯಕ್ರಮ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ