ಉಡುಪಿ: ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿಯಾಗಿದ್ದ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದರ ವಿಯೋಗದಿಂದ ತೆರವಾದ ಖಾಝಿ ಸ್ಥಾನಕ್ಕೆ ಸಂಯುಕ್ತ ಜಮಾಅತ್ ನ ವ್ಯಾಪ್ತಿಯ ಸುಮಾರು 100 ರಷ್ಟು ಮಸೀದಿಗಳಿಗೆ ಖಾಝಿಯಾಗಿ ಕರ್ನಾಟಕ ಸುನ್ನೀ ಉಲಮಾ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿಯೂ, ಕನ್ನಡ ನಾಡಿನ ಖ್ಯಾತ ವಿದ್ವಾಂಸರೂ ಆದ ಝೈನುಲ್ ಉಲಮಾ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದರನ್ನು ನೇಮಿಸುವುದೆಂದು ಸಂಯುಕ್ತ ಜಮಾಅತ್ ನ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

ಸಂಯುಕ್ತ ಜಮಾಅತ್ ನ ಅಧ್ಯಕ್ಷರಾದ ಹಾಜಿ ಪಿ ಅಬೂಬಕ್ಕರ್ ನೇಜಾರ್ ರವರ ಸಭಾಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಂಯುಕ್ತ ಜಮಾಅತ್ ನ ಸದಸ್ಯರುಗಳು, ಜಿಲ್ಲೆಯ ಪ್ರಮುಖ ಉಲಮಾ ಹಾಗೂ ಉಮರಾ ನೇತಾರರು ಭಾಗವಹಿಸಿದರು.
ಅಕ್ಟೋಬರ್ 10 ಶನಿವಾರ ಬೆಳಿಗ್ಗೆ ಗಂಟೆ 10ಕ್ಕೆ ಕೇಂದ್ರ ಮಸೀದಿ ಮೂಳೂರು ನಲ್ಲಿ ಖಾಝಿ ಸ್ವೀಕಾರ ಸಮಾರಂಭ ಹಾಗೂ ತಾಜುಲ್ ಫುಖಹಾಅ ಬೇಕಲ್ ಉಸ್ತಾದ ಹೆಸರಿನಲ್ಲಿ ಪ್ರಾರ್ಥನಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ ನಡೆಯಲಿದೆ ಈ ಕಾರ್ಯಕ್ರಮದಲ್ಲಿ ಸಾದಾತುಗಳು, ಉನ್ನತ ಉಲಮಾಗಳೂ,ಉಮರಾ ನಾಯಕರೂ ಭಾಗವಹಿಸಲಿರುವರು.
ಹಾಜಿ ಪಿ ಅಬೂಬಕ್ಕರ್ ನೇಜಾರು (ಅಧ್ಯಕ್ಷರು)
ಹಾಜಿ ಎಮ್ ಎ ಬಾವು ಮೂಳೂರು (ಪ್ರಧಾನ ಕಾರ್ಯದರ್ಶಿ)
ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ (ಸಂಘಟನಾ ಕಾರ್ಯದರ್ಶಿ)
ಸುನ್ನೀ ಸಂಯುಕ್ತ ಜಮಾಅತ್ ಉಡುಪಿ ಜಿಲ್ಲೆ















ಇನ್ನಷ್ಟು ಸುದ್ದಿಗಳು
ಸುನ್ನೀ ಕೋ-ಓಡಿನೇಶನ್ ವತಿಯಿಂದ ಎಮ್ ಎ ಗಫೂರ್ ರವರಿಗೆ ಸನ್ಮಾನ
ಉಡುಪಿಯಲ್ಲಿ : ಎಸ್ ವೈ ಎಸ್ ‘ಸೌಹಾರ್ದ ಸಂಚಾರ’
ಎಸ್ಡಿಪಿಐ ಹಾವೇರಿ ಜಿಲ್ಲೆ- ನೂತನ ಅಧ್ಯಕ್ಷರಾಗಿ ಜಿಲಾನಿ ಮೇದೂರು ಆಯ್ಕೆ
ನಮ್ಮ ನಾಡ ಒಕ್ಕೂಟ: ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಸಹಾಯಧನ ವಿತರಣೆ
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಎನ್.ಎನ್.ಓ ಉಡುಪಿ ಜಿಲಾ ಸಮಿತಿ: ಕಟ್ಟಡ ದಾನಿಗೆ ಸನ್ಮಾನ
ಉಡುಪಿ: ಬಡ ಪ್ರತಿಭಾವಂತ ವಿದ್ಯಾರ್ಥಿಗೆ ಸಹಾಯಧನ ಹಸ್ತಾಂತರ
ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಪದಗ್ರಹಣ ಹಾಗೂ ಸನ್ಮಾನ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪರ್ಕಳ ಹಾಜಿ ಅಬ್ದುಲ್ಲಾ ಸಾಹೇಬರಿಗೆ ಸನ್ಮಾನ
ಖಿದ್ಮಾ ಫೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ