ಮಂಗಳೂರು,ಅ.06: ಪ್ರಸಕ್ತ 2020 ನೇ ಶೈಕ್ಷಣಿಕ ಸಾಲಿನ ದ.ಕ. ಜಿಲ್ಲೆಯ ವಿದ್ಯಾರ್ಥಿಗಳ ಅರಿವು ಯೋಜನೆಯ ನಿಧಿ ಬಿಡುಗಡೆಗೊಳ್ಳದ ಸಂತ್ರಸ್ತ ಮತ್ತು ಸಂದಿಗ್ಧ ಪರಿಸ್ಥಿತಿಯನ್ನು ಇತ್ಯರ್ಥ ಪಡಿಸುವಂತೆ ಕೋರಿ ಅಖಿಲ ಭಾರತ ಬ್ಯಾರಿ ಮಹಾಸಭಾ ನಿಯೋಗವು ಇಂದು ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಜಿಲ್ಲೆಯ ಅಗಾಧ ವಿದ್ಯಾರ್ಥಿ, ವಿದ್ಯಾರ್ಥಿನಿಗಳು 2020 ನೇ ಸಾಲಿನ ತಮ್ಮ ವಿದ್ಯಾಭ್ಯಾಸಕ್ಕಾಗಿ ಅರಿವು ಯೋಜನೆಯ ಶೈಕ್ಷಣಿಕ ಸಾಲವನ್ನು ಅವಲಂಬಿಸಿದ್ದು, ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಕೋವಿಡ್ 19 ಪರಿಣಾಮದಿಂದ ಸೃಷ್ಟಿಯಾದ ಸಾಮೂಹಿಕ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ತೀವ್ರ ಸಂಕಷ್ಟ ಮತ್ತು ಸಂದಿಗ್ಧತೆಯಲ್ಲಿದೆ.
ಶೈಕ್ಷಣಿಕ ಸಂಸ್ಥೆಗಳು ತಮ್ಮ ಹಾಲಿ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸುವಂತೆ ಒತ್ತಡ ಹೇರುತ್ತಿದ್ದು, ಅರಿವು ಯೋಜನೆಯ ಫಲಾನುಭವಿಗಳು ಸರ್ಕಾರದ ಸ್ಪಷ್ಟ ಮಾಹಿತಿ ಇಲ್ಲದೆ ಮತ್ತು ಕೋವಿಡ್ ಪರಿಣಾಮಿತ ಆರ್ಥಿಕ ಸಂಕಷ್ಟದಿಂದ ಶಿಕ್ಷಣ ಮುಂದುವರಿಸುವ ಬಗ್ಗೆ ಚಿಂತಿತರಾಗಿದ್ದಾರೆ. ಶೆಕ್ಷಣಿಕ ಇಲಾಖೆ ಮತ್ತು ವಿಶ್ವವಿದ್ಯಾನಿಲಯಗಳ ಸುತ್ತೋಲೆಗಳ ಮಾಹಿತಿಗಳನ್ನು ವ್ಯತ್ಯಯಗೊಳಿಸಿ ಶೈಕ್ಷಣಿಕ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳಿಗೆ ಮತ್ತು ರಕ್ಷಕರಿಗೆ ತಪ್ಪು ಸಂದೇಶ ನೀಡಿ ಶುಲ್ಕ ಪಡೆಯುವಿಕೆಗಾಗಿ ಒತ್ತಡ ಹೇರಲಾಗುತ್ತಿದೆ.
ಈ ಬಗ್ಗೆ ಜಿಲ್ಲಾಡಳಿತ/ ಸರ್ಕಾರ ಮಧ್ಯ ಪ್ರವೇಶಿಸಿ ಶೈಕ್ಷಣಿಕ ಸಂಸ್ಥೆಗಳಿಗೆ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಸರ್ಕಾರದ ನಿಲುವನ್ನು ವ್ಯಕ್ತಪಡಿಸಬೇಕಾಗಿಯೂ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಉಪನ್ಯಾಸ ಮತ್ತು ಪರೀಕ್ಷೆಗಳನ್ನು ಮುಂದುವರಿಸಿ ಕೊಂಡು ಹೋಗಲು ಮತ್ತು ಅರಿವು ಬಿಡುಗಡೆಗೊಳ್ಳುವ ವರೆಗೆ ಶುಲ್ಕ ಪಾವತಿಸುವಂತೆ ಪೋಶಕರಿಗೆ ಒತ್ತಡ ಹೇರಬಾರದೆಂದು ಶೈಕ್ಷಣಿಕ ಸಂಸ್ಥೆಗಳಿಗೆ ನಿರ್ದೇಶಿಸಲು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ನಿಯೋಗದಲ್ಲಿ ಬ್ಯಾರಿ ಸಭಾ ಅಧ್ಯಕ್ಷರಾದ ಅಝೀಝ್ ಬೈಕಂಪಾಡಿ, ಸದಸ್ಯರಾದ ಮುಹಮ್ಮದ್ ಹನೀಫ್ ಯು, ಬಷೀರ್ ಹೊಕ್ಕಾಡಿ ಮತ್ತಿತರರು ಉಪಸ್ಥಿತರಿದ್ದರು. ಮನವಿ ಸ್ವೀಕರಿಸಿದ ಉಸ್ತುವಾರಿ ಸಚಿವರು , ಜಿಲ್ಲಾಧಿಕಾರಿ ಮೂಲಕ ಶೈಕ್ಷಣಿಕ ಸಂಸ್ಥೆಗಳಿಗೆ ನಿರ್ದೇಶನ ನೀಡುವ ಭರವಸೆ ನೀಡಿದರು.
ಜಿಲ್ಲೆಯ ಅಗಾಧ ವಿದ್ಯಾರ್ಥಿ, ವಿದ್ಯಾರ್ಥಿನಿಗಳು 2020 ನೇ ಸಾಲಿನ ತಮ್ಮ ವಿದ್ಯಾಭ್ಯಾಸಕ್ಕಾಗಿ ಅರಿವು ಯೋಜನೆಯ ಶೈಕ್ಷಣಿಕ ಸಾಲವನ್ನು ಅವಲಂಬಿಸಿದ್ದು, ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಕೋವಿಡ್ 19 ಪರಿಣಾಮದಿಂದ ಸೃಷ್ಟಿಯಾದ ಸಾಮೂಹಿಕ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ತೀವ್ರ ಸಂಕಷ್ಟ ಮತ್ತು ಸಂದಿಗ್ಧತೆಯಲ್ಲಿದೆ.ಶೈಕ್ಷಣಿಕ ಸಂಸ್ಥೆಗಳು ತಮ್ಮ ಹಾಲಿ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸುವಂತೆ ಒತ್ತಡ ಹೇರುತ್ತಿದ್ದು, ಅರಿವು ಯೋಜನೆಯ ಫಲಾನುಭವಿಗಳು ಸರ್ಕಾರದ ಸ್ಪಷ್ಟ ಮಾಹಿತಿ ಇಲ್ಲದೆ ಮತ್ತು ಕೋವಿಡ್ ಪರಿಣಾಮಿತ ಆರ್ಥಿಕ ಸಂಕಷ್ಟದಿಂದ ಶಿಕ್ಷಣ ಮುಂದುವರಿಸುವ ಬಗ್ಗೆ ಚಿಂತಿತರಾಗಿದ್ದಾರೆ. ಶೆಕ್ಷಣಿಕ ಇಲಾಖೆ ಮತ್ತು ವಿಶ್ವವಿದ್ಯಾನಿಲಯಗಳ ಸುತ್ತೋಲೆಗಳ ಮಾಹಿತಿಗಳನ್ನು ವ್ಯತ್ಯಯಗೊಳಿಸಿ ಶೈಕ್ಷಣಿಕ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳಿಗೆ ಮತ್ತು ರಕ್ಷಕರಿಗೆ ತಪ್ಪು ಸಂದೇಶ ನೀಡಿ ಶುಲ್ಕ ಪಡೆಯುವಿಕೆಗಾಗಿ ಒತ್ತಡ ಹೇರಲಾಗುತ್ತಿದೆ.
ಈ ಬಗ್ಗೆ ಜಿಲ್ಲಾಡಳಿತ/ ಸರ್ಕಾರ ಮಧ್ಯ ಪ್ರವೇಶಿಸಿ ಶೈಕ್ಷಣಿಕ ಸಂಸ್ಥೆಗಳಿಗೆ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಸರ್ಕಾರದ ನಿಲುವನ್ನು ವ್ಯಕ್ತಪಡಿಸಬೇಕಾಗಿಯೂ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಉಪನ್ಯಾಸ ಮತ್ತು ಪರೀಕ್ಷೆಗಳನ್ನು ಮುಂದುವರಿಸಿ ಕೊಂಡು ಹೋಗಲು ಮತ್ತು ಅರಿವು ಬಿಡುಗಡೆಗೊಳ್ಳುವ ವರೆಗೆ ಶುಲ್ಕ ಪಾವತಿಸುವಂತೆ ಪೋಶಕರಿಗೆ ಒತ್ತಡ ಹೇರಬಾರದೆಂದು ಶೈಕ್ಷಣಿಕ ಸಂಸ್ಥೆಗಳಿಗೆ ನಿರ್ದೇಶಿಸಲು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ನಿಯೋಗದಲ್ಲಿ ಬ್ಯಾರಿ ಸಭಾ ಅಧ್ಯಕ್ಷರಾದ ಅಝೀಝ್ ಬೈಕಂಪಾಡಿ, ಸದಸ್ಯರಾದ ಮುಹಮ್ಮದ್ ಹನೀಫ್ ಯು, ಬಷೀರ್ ಹೊಕ್ಕಾಡಿ ಮತ್ತಿತರರು ಉಪಸ್ಥಿತರಿದ್ದರು. ಮನವಿ ಸ್ವೀಕರಿಸಿದ ಉಸ್ತುವಾರಿ ಸಚಿವರು , ಜಿಲ್ಲಾಧಿಕಾರಿ ಮೂಲಕ ಶೈಕ್ಷಣಿಕ ಸಂಸ್ಥೆಗಳಿಗೆ ನಿರ್ದೇಶನ ನೀಡುವ ಭರವಸೆ ನೀಡಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್