janadhvani

Kannada Online News Paper

ಹತ್ರಾಸ್ ಅಮಾನವೀಯ ಕೃತ್ಯವನ್ನು ಖಂಡಿಸಿ ದ.ಕ. ಮುಸ್ಲಿಮ್ ಒಕ್ಕೂಟ ಪ್ರತಿಭಟನೆ

ಮಂಗಳೂರು,ಅ.11: ಇಲ್ಲಿನ ಕ್ಲಾಕ್ ಟವರ್ ಬಳಿ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಅಮಾನವೀಯ ಕೃತ್ಯವನ್ನು ವಿರೋಧಿಸಿ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಮೌನ ಪ್ರತಿಭಟನೆ ನಡೆಸಿತು.

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಇತ್ತೀಚೆಗೆ ನಡೆದ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ, ಅಧ್ಯಕ್ಷರಾದ
ಕೆ.ಅಶ್ರಫ್ ನೇತೃತ್ವದಲ್ಲಿ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಮತ್ತು ಸಮಾನ ಮನಸ್ಕ ವ್ಯಕ್ತಿಗಳಿಂದ ಮೌನ ಪ್ರತಿಭಟನೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಸಂಘಟನೆಯ ನಾಯಕರು, ಕಾರ್ಯಕರ್ತರು ಸಹಿತ ಹಲವು ಮಂದಿ ಭಾಗವಹಿಸಿದ್ದರು.

error: Content is protected !! Not allowed copy content from janadhvani.com