ಸೌದಿ ಅರೇಬಿಯಾದ: ಖಮೀಸ್ ಮುಶೈತ್, ಎಂಬಲ್ಲಿ ಕಳೆದ ಸುಮಾರು ಎರಡು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮೂಲತಃ ಹೈದರಾಬಾದ್ (ತೆಲಂಗಾಣ) ನಿವಾಸಿ #ಶೇಖ್ ಮುಹಮ್ಮದ್# ಎಂಬವರನ್ನು , ಕೆ.ಸಿ.ಎಫ್ ಸಾಂತ್ವನ ತಂಡದ ನಾಯಕರು ಸಂಪರ್ಕಿಸಿ, ಅವರಿಗೆ ಬೇಕಾಗಿರುವ ಎಲ್ಲಾ ರೀತಿಯ ಆರೋಗ್ಯ, ಸಲಹೆ, ಆರೈಕೆಯನ್ನು ಮಾಡಿ ಕೊನೆಗೂ ಊರಿಗೆ ಕಳುಹಿಸುವ ವ್ಯವಸ್ಥೆಯನ್ನು ಮಾಡಿಕೊಟ್ಟಿದ್ದಾರೆ.

ಈ ಒಂದು ಸಾಂತ್ವನ ಸೇವೆಗೆ ಕೆ.ಸಿ.ಎಫ್ ಖಮೀಸ್ ಮುಶೈತ್ ಸೆಕ್ಟರ್ ನಾಯಕರಾದ #ಜನಾಬ್ ಅಬ್ದುಲ್ ರಝಾಕ್ ಬನ್ನೂರ್ ಹಾಗೂ #ಸಲ್ಮಾನ್ ಚಿಕ್ಕಮಗಳೂರು, #ಖಾಲಿದ್ ಕಬಕ, #ಇಕ್ಬಾಲ್ ಮದನಿ ಪಾವೂರು, ಕೆ.ಸಿ.ಎಫ್ ಮದೀನಾ ಸಾಂತ್ವನ ವಿಭಾಗದ ನಾಯಕರಾದ #ಅಬ್ದುಲ್ ರಝಾಕ್ ಉಳ್ಳಾಲ್# ಸಹಿತವಿರುವ ತಂಡ.. ನಡೆಯಲು ಸಾಧ್ಯವಾಗದ ಶೇಖ್ ಮುಹಮ್ಮದ್ ರವರನ್ನು ನಿನ್ನೆ (10/10/2020) ರಂದು ಜಿದ್ದಾ ವಿಮಾನ ನಿಲ್ದಾಣ ಮೂಲಕ ಪ್ರತ್ಯೇಕ ಆಸನದ ಸೌಕರ್ಯವನ್ನು ಏರ್ಪಡಿಸಿ ತಾಯ್ನಾಡಿಗೆ ಕಳುಹಿಸಲು ಯಶಸ್ವಿಯಾಗಿದ್ದಾರೆ.
ಈ ಮೂಲಕ ಅನಿವಾಸಿ ಕನ್ನಡಿಗರ ಸಂಘಟನೆಯಾದ ಕೆ.ಸಿ.ಎಫ್ ನೇತೃತ್ವದಲ್ಲಿ, ಕನ್ನಡಿಗರಲ್ಲದೆ ಇತರ ರಾಜ್ಯದ ಅನಿವಾಸಿಗರಿಗೂ ತನ್ನ ಸಾಂತ್ವನ ಸೇವೆಯ ಪುಷ್ಟಿಯನ್ನು ನೀಡುತ್ತಾ ಕೆ.ಸಿ.ಎಫ್ ನ ಕಾರ್ಯಾಚರಣೆಯನ್ನು ಯಾವುದೇ ಭೇದವಿಲ್ಲದೆ ಎಲ್ಲಾ ಕಾರ್ಯಕ್ಷೇತ್ರಗಳಿಗೆ ಮೀಸಲಿಟ್ಟಿದ್ದು ಹೆಮ್ಮೆಯ ವಿಚಾರ ಎಂದು ಕೆ.ಸಿ.ಎಫ್ ಖಮೀಸ್ ಮುಶೈತ್ ಸೆಕ್ಟರ್ ಅದ್ಯಕ್ಷರಾದ #ಅಬ್ದುಲ್ ರಝಾಕ್ ಬನ್ನೂರು# ಈ ಕುರಿತು ಅಭಿಪ್ರಾಯ ಪಟ್ಟಿದ್ದಾರೆ.
ವರದಿ:
ಆಸಿಫ್ ಬದ್ಯಾರ್,















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು