janadhvani

Kannada Online News Paper

ರಾಜ್ಯ ಮಟ್ಟದ ಕೃತಿ ಪರಿಚಯ ಸ್ಪರ್ಧೆ 2020: ಕಡಬದ ಸಮ್ಯಕ್ತ್ ಜೈನ್ ಪ್ರಥಮ

ಕರೋನಾ ಹಾವಳಿಯಿಂದಾಗಿ ಎಷ್ಟೋ ಕೆಡುಕುಗಳಾದರೂ ಪ್ರತಿಭೆಗಳಿಗಂತೂ ತುಂಬಾನೇ ಒಳಿತುಗಳೇ ಆಗಿಗೆ ಎನ್ನುವುದಕ್ಕೆ ಕಡಬ ತಾಲೂಕಿನ ನೂಜಿಬಾಳ್ತಿದ ಸಮ್ಯಕ್ತ್ ಜೈನ್ ರವರು ಸಾಕ್ಷಿ ಅಂತಾನೇ ಹೇಳಬಹುದು.
ಹೌದು , ಗ್ರಾಮೀಣ ಪ್ರದೇಶದಲ್ಲಿದ್ದುಕೊಂಡು ಅಂತರ್ರಾಜ್ಯ ಮಟ್ಟದಲ್ಲಿ ಸಾಧನೆಗೈಯುತ್ತಿರುವ ಯುವ ಪ್ರತಿಭೆ ಸಮ್ಯಕ್ತ್ ಜೈನ್ ಇದಕ್ಕೆ ಪ್ರತ್ಯಕ್ಷ ಸಾಕ್ಷಿ.

ಇದುವರೆಗೆ ಮೂರು ಕವನಸಂಕಲನವನ್ನು ಬರೆದು – ಪ್ರಕಟಗೊಳಿಸಿ , ಸಾಹಿತ್ಯಿಕ ಚಟುವಟಿಕೆಯಲ್ಲಿ ತಲ್ಲೀನರಾಗಿರುವ ಸಮ್ಯಕ್ತ್ .ಜೈನ್ ರವರಿಗೆ ಇದೀಗ ಮತ್ತೊಂದು ಸಾಧನೆಯ ಗರಿ ಸೇರ್ಪಡೆಗೊಂಡಿದೆ. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಇತ್ತೀಚೆಗೆ , ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಕೃತಿಗಳ ಪರಿಚಯ ಸ್ಪರ್ಧೆ 2020 ಯನ್ನು ಆಯೋಜಿಸಿತ್ತು . ಇದರಲ್ಲಿ ರಾಧೇಶ್ ತೋಳ್ಪಾಡಿರವರು ಬರೆದ ಮಕ್ಕಳ ಕವಿತೆಯ ಕೃತಿಯೊಂದನ್ನು ಪರಿಚಯಿಸಿದ ಇವರು , ಪ್ರಥಮ ಸ್ಥಾನವನ್ನು ಪಡೆದು ಸಂಸ್ಥೆಯಿಂದ ಕೊಡಲ್ಪಡುವ ಪ್ರಶಸ್ತಿ – ಪುರಸ್ಕಾರವನ್ನು ಪಡೆದಿರುತ್ತಾರೆ .

ನೂಜಿಬಾಳ್ತಿಲ , ಹೊಸಂಗಡಿ ಬಸದಿ ಶ್ರೀ ಧರಣೇಂದ್ರ ಇಂದ್ರ ಮತ್ತು ಶ್ರೀಮತಿ ಮಂಜುಳಾರವರ ಸುಪುತ್ರರಾಗಿರುವ ಇವರು ಕವಿ ,ಲೇಖಕ ,ನಾಟಕ ರಚನೆಗಾರ, ಯುವ ಚಿಂತಕ,ನಿರೂಪಕ, ವಾಗ್ಮಿಯಾಗಿ ಚಿರಪರಿಚಿತಗೊಂಡಿದ್ದು , ತನ್ನ ಸಾಧನೆಯೊಂದಿಗೆ ಊರಿನ ಹೆಸರನ್ನೂ ರಾಜ್ಯ ಮಟ್ಟದಲ್ಲಿ ಮಿಂಚುವಂತೆ ಮಾಡುತ್ತಿದ್ದಾರೆ .

error: Content is protected !! Not allowed copy content from janadhvani.com