ಕೋಝಿಕ್ಕೋಡ್ | ಕೋವಿಡ್ ಸಂತ್ರಸ್ತರ ಅಂತ್ಯಕ್ರಿಯೆ ಸಂಬಂಧಿಸಿದ ಶಿಷ್ಟಾಚಾರವನ್ನು ಸಡಿಲಿಸುವಂತೆ ಆಗ್ರಹಿಸಿ ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಹೊರಡಿಸಿದ ಮಾರ್ಗಸೂಚಿಯ ಪ್ರಕಾರ, ಕೋವಿಡ್ ಸೋಂಕಿನಿಂದ ಮರಣಿಸಿದ ವ್ಯಕ್ತಿಯಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳನ್ನು ನಡೆಸಲು ಅನುಮತಿಸಲಾಗಿದೆ.
ಪಿಪಿಇ ನಿಯಮಗಳನ್ನು ಪಾಲಿಸಿ ಮೃತ ಶರೀರವನ್ನು ವೀಕ್ಷಿಸಲು ಹಾಗೂ ನೀರಿನ ಸ್ಪರ್ಶವನ್ನು ತಡೆಯುವ ಕೈಗವಸುಗಳಂತಹ ವಸ್ತುಗಳನ್ನು ಧರಿಸಿ ಸ್ನಾನ ಮಾಡಿಸುವುದನ್ನು ಮಾರ್ಚ್ 24, 2020 ರಂದು ಹೊರಡಿಸಲಾದ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಾರ್ಗಸೂಚಿಗಳಲ್ಲಿ ಅನುಮತಿಸಿದೆ.
ಆದಾಗ್ಯೂ,ಕೋವಿಡ್ ಮೃತ ವ್ಯಕ್ತಿಯ ಸ್ನಾನ ಮಾಡಿಸುವುದು ಮತ್ತು ಧಾರ್ಮಿಕ ರೀತಿಯಲ್ಲಿ ವಸ್ತ್ರ ಧರಿಸುವುದನ್ನು ನಿಷೇಧಿಸುವ ಅಸ್ತಿತ್ವದಲ್ಲಿರುವ ಕೋವಿಡ್ ಶಿಷ್ಟಾಚಾರವು ಮರಣ ಹೊಂದಿದವರಿಗೆ ಅಗೌರವ ತೋರುತ್ತವೆ.
ಎಲ್ಲಾ ಧರ್ಮಗಳು ಮೃತ ಶರೀರವನ್ನು ಅತ್ಯಂತ ಗೌರವದಿಂದ ಕಾಣುವ ವಿಧಾನವನ್ನು ಅಳವಡಿಸಿಕೊಂಡಿವೆ. ಇದಲ್ಲದೆ, ಗಂಭೀರ ಕಾಯಿಲೆಯಿಂದ ಆಸ್ಪತ್ರೆಯಲ್ಲಿ ಕಳೆದು, ಮರಣ ನಂತರ ಧಾರ್ಮಿಕ ಪ್ರಕಾರ ಆಚರಣೆಗಳನ್ನು ಮಾಡಲು ಸಾಧ್ಯವಾಗುವುದಿಲ್ಲ ಎಂಬುದು ದುಃಖಕರ.
ಆದ್ದರಿಂದ, ವಿಶ್ವ ಆರೋಗ್ಯ ಸಂಸ್ಥೆ ಹೊರಡಿಸಿದ ಮಾನದಂಡಗಳಿಗೆ ಅನುಗುಣವಾಗಿ ಆರೋಗ್ಯವಂತ ಜನರು, ಮೃತ ವ್ಯಕ್ತಿಯ ಮೇಲೆ ಧಾರ್ಮಿಕ ವಿಧಿಗಳನ್ನು ನಡೆಸಲು ಸಾಧ್ಯವಾಗುವಂತೆ ದೇಶದ ಪ್ರೋಟೋಕಾಲ್ ಅನ್ನು ತಿದ್ದುಪಡಿ ಮಾಡಬೇಕೆಂದು ಪತ್ರದಲ್ಲಿ ಕಾಂತಪುರಂ ಒತ್ತಾಯಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ