ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ 2.5 ಕೆ.ಜಿ ಚಿನ್ನ ನಾಪತ್ತೆಯಾಗಿದೆ. ಈ ಸಂಬಂಧ ಕಸ್ಟಮ್ಸ್ ಜಂಟಿ ಆಯುಕ್ತ ನೀಡಿದ ದೂರಿನ ಮೇರೆಗೆ 5 ಮಂದಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ. ಬೆಂಗಳೂರಿನ ಸಿಬಿಐ ಎಸಿಬಿಯಲ್ಲಿ ದೂರು ದಾಖಲಾಗಿದೆ.
ಜೂನ್ 2012- ಡಿಸೆಂಬರ್ 2014 ರವರೆಗೆ ಏರ್ಪೋರ್ಟ್ನಲ್ಲಿ 13 ಪ್ರಕರಣದಲ್ಲಿ ಜಪ್ತಿ ಮಾಡಿದ್ದ ಚಿನ್ನವನ್ನ ಎಂಹೆಚ್ಬಿ ಗೋಡಾನ್ನಲ್ಲಿಡಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಬಿಐಗೆ ದೂರು ನೀಡಲಾಗಿತ್ತು. ಹೀಗಾಗಿ, ಐವರು ಕಸ್ಟಮ್ಸ್ ಅಧಿಕಾರಿಗಳು ಸೇರಿ ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಗೋಡಾನ್ನ ಸೇಫ್ಟಿ ಮತ್ತು ಉಸ್ತುವಾರಿ ಅಧಿಕಾರಿಗಳ ವಿರುದ್ಧ ದೂರು ನೀಡಲಾಗಿತ್ತು. ಅಕ್ಟೋಬರ್ 12ರಂದು ಸಿಬಿಐ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದೆ.
ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ ಸಹಾಯಕ ಆಯುಕ್ತರಾದ ವಿನೋದ್ ಚಿನ್ನಪ್ಪ, ಕೆ. ಕೇಶವ್, ಸೂಪರಿಂಟೆಂಡೆಂಟ್ ಎನ್.ಜೆ. ರವಿಶೇಖರ್, ಡೀನ್ರೆಕ್ಸ್, ಕೆ.ಇ. ಲಿಂಗರಾಜು ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ