ಮಂಗಳೂರು,ನ.6: ನಗರದ ಪುರಭವನದ ಸಮೀಪ ಇಂದು ವಿವಿಧ ಸಂಘಟನೆಗಳು ಮತ್ತು ಆಹಾರದ ಹಕ್ಕು ಸಂರಕ್ಷಣಾ ಹೋರಾಟ ಸಮಿತಿಯಿಂದ ಪ್ರತಿಭಟನಾ ಸಭೆ ನಡೆಯಿತು.
ಜನರ ಆಹಾರದ ಹಕ್ಕುಗಳನ್ನು ಸಂರಕ್ಷಿಸುವ ವಿಷಯದಲ್ಲಿ ವಿವಿಧ ಮುಖಂಡರು ಮತ್ತು ಜನಪ್ರತಿನಿಧಿಗಳು ವಿಷಯ ಮಂಡಿಸಿ ,ರಾಜ್ಯ ಸರ್ಕಾರ ಪ್ರಸ್ತುತ ಜಾರಿಗೆ ತರಲಿರುವ ಗೋ ಹತ್ಯೆ ನಿಷೇಧ ಕ್ರಮಗಳನ್ನು ವಿರೋಧಿಸಿದರು.

ಸಭೆಯಲ್ಲಿ ಆಡು, ಕುರಿ, ಕೋಳಿ,ಜಾನುವಾರು ಮತ್ತು ಮತ್ಸ್ಯ ಮಾಂಸಗಳನ್ನು ಭಕ್ಷಿಸುವ ನಮ್ಮ ಹಕ್ಕುಗಳನ್ನು ರಕ್ಷಿಸುವ ಮಹತ್ವದ ಬಗ್ಗೆ ಮಾತನಾಡಿದರು. ಆಹಾರದ ಹಕ್ಕುಗಳನ್ನು ಸಂರಕ್ಷಿಸುವ ಹೋರಾಟ ನಿರಂತರ ಮುಂದುವರಿಯಲಿದೆ ಎಂದು ಘೋಷಿಸಲಾಯಿತು.
ಪ್ರತಿಭಟನೆಯಲ್ಲಿ ಐವನ್ ಡಿ ಸೋಜಾ, ಮೊಯಿದಿನ್ ಬಾವ, ಸುನಿಲ್ ಬಜಾಲ್, ಯಾದವ ಶೆಟ್ಟಿ,ಕೆ.ಅಶ್ರಫ್(ಮಾಜಿ ಮೇಯರ್) , ಆಲಿ ಹಸನ್, ಸದಾಶಿವ ಸುಳ್ಯ ರವರು ಪಾಲ್ಗೊಂಡು ಮಾತನಾಡಿದರು.
ಎಚ್. ಬೀ ಟೀ.ಶಂಶುದೀನ್, ಕಬೀರ್ ಉಳ್ಳಾಲ್, ಮೊಹಮ್ಮದ್ ಹನೀಫ್.ಯು, ಸಮೀರ್ ಆರ್.ಕೆ, ಮೊಯಿದಿನ್ ಮೋನು, ಯಾಸೀನ್ ಕುದ್ರೋಳಿ, ಹನೀಫ್ ಉಳ್ಳಾಲ್, ಖಾದರ್, ಸತ್ತಾರ್, ರವರನ್ನೊಳ ಗೊಂಡು ಹಲವಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್