ಮಂಗಳೂರು : ಕರ್ನಾಟಕ ಮುಸ್ಲಿಂ ಜಮಾಅತ್ ಮಂಗಳೂರು ಸಮಿತಿಯ ಕಾರ್ಯದರ್ಶಿ ಕೈಕಂಬದ ಸಾಮಾಜಿಕ ಮುಂದಾಳು ವೆನ್ಝ್ ಅಬ್ದುಲ್ ಅಝೀಝ್ ವಿರುದ್ಧ ಕೊಲೆ ಯತ್ನ ನಡೆದು ತೀವ್ರ ಗಾಯಗೊಂಡು ನಗರದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದಾರೆ.
ಘಟನೆ ನಡೆದು ಇಂದಿಗೆ ಮೂರು ದಿನಗಳು ಕಳೆದಿದೆ. ಹಲವರ ಮೇಲೆ ಎಪ್ ಐ ಆರ್ ದಾಖಲಾಗಿದ್ದರೂ ಇದುವರೆಗೆ ಬಂದನಾವಾಗದಿರುವುದು ಖೇದಕರ. ಕೈಕಂಬ ಪರಿಸರದಲ್ಲಿ ಸಾಮಾಜಿಕ ಶೈಕ್ಷಣಿಕ ಬಡವರ ಕಲ್ಯಾಣ ಕಾರ್ಯಗಳಿಗಾಗಿ ನಿರಂತರವಾಗಿ ದುಡಿಯುತ್ತಿದ್ದ, ವಿವಿಧ ಮುಸ್ಲಿಂ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ವೆನ್ಝ್ ಅಬ್ದುಲ್ ಅಝೀಝ್ ರ ಕೊಲೆಯತ್ನವು ಪರಿಸರದ ಸಾಮಾಜಿಕ ಕಾರ್ಯಕರ್ತರಲ್ಲಿ ಆತಂಕ ಮೂಡಿಸಿದೆ.
ಸಮಾಜಘಾತುಕ ಶಕ್ತಿಗಳ ಎಲ್ಲಾ ವಿಧ ದುಷ್ಕೃತ್ಯಗಳ ವಿರುದ್ಧ ಪ್ರತಿಭಟಿಸಲು ಕೈಕಂಬ ಪರಿಸರದ ಸರ್ವ ಸಂಘ ಸಂಸ್ಥೆಗಳು ಮುಂದೆ ಬರಬೇಕಾದ ಅಗತ್ಯ ಇದೆ.ಆರೋಪಿಗಳು ರಾಜಾರೋಷವಾಗಿ ತಿರುಗುತ್ತಿದ್ದಾರೆಂದು ಕೈಕಂಬ ಸುತ್ತಮುತ್ತಲಿನ ಜನತೆಯು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ಆದುದರಿಂದ ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಇಂತಹ ನಡೆಯು ಪೋಲಿಸ್ ಇಲಾಖೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುವಂತಹದ್ದಾಗಿದೆ. ಆರೋಪಿಗಳು ಎಷ್ಟೇ ಪ್ರಭಾವಿಯಾಗಿದ್ದರೂ ಸೂಕ್ತ ಕ್ರಮಕೈಗೊಂಡು, ಮುಂದೆ ಇಂತಹ ಪಾತಕ ಕೃತ್ಯಕ್ಕೆ ಇಳಿಯುವವರಿಗೆ ಎಚ್ಚರಿಕೆ ನೀಡುವಂತಾಗಿರಬೇಕು.
ಆಶ್ರಫ್ ಕಿನಾರ ಮಂಗಳೂರು
ರಾಜ್ಯ ಸದಸ್ಯರು ಕರ್ನಾಟಕ ಮುಸ್ಲಿಂ ಜಮಾಅತ್
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್