ಮುಂಬಯಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ಆರ್ಥಿಕ ಸುಧಾರಣಾ ಕ್ರಮಗಳು ಮುಂಬರುವ ವರ್ಷಗಳಲ್ಲಿ ದೇಶದ ತ್ವರಿತ ಆರ್ಥಿಕ ಬೆಳವಣಿಗೆಗೆ ಕಾರಣವಾಗಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.
ಪಂಡಿತ್ ದೀನ್ದಯಾಳ್ ಪೆಟ್ರೋಲಿಯಂ ಯೂನಿವರ್ಸಿಟಿಯ 8ನೇ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಆತ್ಮ ವಿಶ್ವಾಸ ದೇಶಕ್ಕೇ ಪ್ರೇರಣೆ ಕೊಟ್ಟಿದೆ ಎಂದರು.
“ಮೋದಿ ನಾಯಕತ್ವದಲ್ಲಿ ಭಾರತ ಮುಂಬರುವ ವರ್ಷಗಳಲ್ಲಿ ತ್ವರಿತವಾಗಿ ಆರ್ಥಿಕ ಚೇತರಿಕೆ ದಾಖಲಿಸುವ ವಿಶ್ವಾಸ ನನಗಿದೆ” ಎಂದು ಅಂಬಾನಿ ಹೇಳಿದರು.
ಇಂಧನ ವಲಯದಲ್ಲೂ ಭಾರಿ ಬದಲಾವಣೆ ಆಗುತ್ತಿದೆ. ಭಾರತ ಎರಡು ಉದ್ದೇಶ ಹೊಂದಬೇಕು. ಮೊದಲನೆಯದಾಗಿ ಆರ್ಥಿಕವಾಗಿ ಸೂಪರ್ ಪವರ್ ಆಗಬೇಕು. ಎರಡನೆಯದಾಗಿ ಹಸಿರು ಮತ್ತು ಸ್ವಚ್ಛ ಇಂಧನದಲ್ಲೂ ಅಗ್ರಗಣ್ಯವಾಗಿ ಹೊರಹೊಮ್ಮಬೇಕು ಎಂದು ಅಂಬಾನಿ ವಿವರಿಸಿದರು.
















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ
ಕಳಮಶ್ಶೇರಿ ಘಟನೆ ಬಾಂಬ್ ಸ್ಪೋಟದಿಂದ- ಖಚಿತಪಡಿಸಿದ ಡಿಜಿಪಿ ಶೇಖ್ ದರ್ವೇಶ್