ಸಕಲೇಶಪುರ,ನ.22: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಹಾಗೂ ಇಶ್ಕೇ ಮದೀನ ಮಸ್ಕಾನ್ ಅಕಾಡೆಮಿ ಜಂಟಿ ಆಶ್ರಯದಲ್ಲಿ ಹಾಸನ ರಕ್ತನಿಧಿ ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 22 ನವಂಬರ್ 2020 ನೇ ಆದಿತ್ಯವಾರದಂದು ಸಕಲೇಶಪುರ ಪುರಭವನ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.
ಜನಾಬ್:ನೌಶಾದ್ ಹಾಜಿ ಸುರಲ್ಪಾಡಿ(ಅಧ್ಯಕ್ಷರು ನಂಡೆ ಪೆಂಙಳ್) ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮವನ್ನು ಜನಾಬ್:ಝಾಕಿರ್ ಯಾದಗೀರ್(ಅಧ್ಯಕ್ಷರು ಬದ್ರಿಯಾ ಜುಮಾ ಮಸೀದಿ,ಸಕಲೇಶಪುರ) ಉಧ್ಘಾಟಿಸಿದರು.
ಬಹು: ಅಶ್ರಫ್ ಸಖಾಫಿ(ಅಧ್ಯಕ್ಷರು ಇಶ್ಕೇ ಮದೀನ ಮಶ್ಕಾನ್ ಅಕಾಡೆಮಿ) ದುಃವಾಶೀರ್ವಚನ ನೀಡಿ ಬಹು:ಮುನೀರ್ ಮುಸ್ಲಿಯಾರ್ ಕಿರಾಅತ್ ಪಠಿಸಿದರು.

ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರದಲ್ಲಿ ಎಲ್ಲಾ ಸುರಕ್ಷಿತಾ ಮುನ್ನೆಚ್ಚರಿಕೆಯನ್ನು ಪಾಲಿಸಿ ಕೊಂಡು ಒಟ್ಟು 31 ಮಂದಿ ರಕ್ತದಾನ ಮಾಡಿ ಜೀವದಾನಿಯಾದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಹಾಸನ ರಕ್ತನಿಧಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.
ಕಾರ್ಯಕ್ರಮದ ಅಂಗವಾಗಿ ನಡೆದ ಉಚಿತ ಮುಂಜಿ (ಸುನ್ನತ್) ಕಾರ್ಯಕ್ರಮದಲ್ಲಿ 15 ಮಕ್ಕಳು ಪಾಲ್ಗೊಂಡು ಸದುಪಯೋಗ ಪಡಿಸಿಕೊಂಡರು. ಡಾ! ಸಿದ್ದೀಕ್ ಅಡ್ಡೂರು(ರಿಫಾ ಪಾಲಿ ಕ್ಲಿನಿಕ್ ಅಡ್ಡೂರು) ಮುಂಜಿ ಕಾರ್ಯಕ್ರಮವನ್ನು ಸುಸೂತ್ರವಾಗಿ ನಡೆಸಿ ಕೊಟ್ಟರು.
ಮುಖ್ಯ ಅತಿಥಿಗಳಾಗಿ ಪೋಕರ್ ಆನೆಮಹಲ್,ಆಸೀಫ್ ಆದರ್ಶ್,ಆದಂ ಹಾಜಿ,ಅಕ್ಬರ್,ಡಾ! ಕಾಂತರಾಜ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಇದರ ಕಾರ್ಯ ನಿರ್ವಾಹಕರು ಉಪಸ್ಥಿತರಿದ್ದರು.ಬಹು:ಹಮೀದ್ ದಾರಿಮಿ ಸ್ವಾಗತಿಸಿ ಅಶ್ರಫ್ ಕಲ್ಲಡ್ಕ ಕಾರ್ಯಕ್ರಮನ್ನು ನಿರೂಪಿಸಿದರು.
ರಕ್ತದಾನ ಮಾಡಿದ ಸರ್ವ ಸಹೃದಯೀ ದಾನಿಗಳಿಗೂ,ಆಸ್ಪತ್ರೆ ಸಿಬ್ಬಂದಿ ವರ್ಗಕ್ಕೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸಕಲೇಶಪುರದ ಜನಸ್ನೇಹಿ ನಾಗರಿಕರಿಗೂ ಹಾಗೂ ಕಾರ್ಯಕ್ರಮದ ಯಶಸ್ವಿಗಾಗಿ ದುಡಿದ ಎಲ್ಲಾ ಕಾರ್ಯಕರ್ತರಿಗೂ, ಮಾಧ್ಯಮ ಪ್ರತಿನಿಧಿಗಳಿಗೂ ಸಂಘಟಕರು ಕೃತಜ್ಞತೆಯನ್ನು ತಿಳಿಸಿದ್ದಾರೆ.
ಪ್ರಕಟಣೆ:
ಮಾಧ್ಯಮ ವಿಭಾಗ:
ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ