ಗುಲ್ಬರ್ಗ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಗುಲ್ಬರ್ಗ ಜಿಲ್ಲಾ ಸಮಿತಿಯನ್ನು ಇಂದು ರಝಾ ಏ ಮುಸ್ತಫಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಸ್ತಿತ್ವಕ್ಕೆ ತರಲಾಯಿತು.
ಎಸ್ಸೆಸ್ಸೆಫ್ ರಾಜ್ಯ ಪ್ರಭಾರ ಅಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಗುಲ್ಬರ್ಗ ರಝಾ ಏ ಮುಸ್ತಫಾದ ಪ್ರಾಂಶುಪಾಲರಾದ ಮೌಲಾನಾ ಜಾವೆದ್ ಹಝ್ರತ್ ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮುಸ್ತಫಾ ನಈಮಿ ಹಾವೇರಿ ದಿಕ್ಸೂಚಿ ಭಾಷಣ ಮಾಡಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಡಗು, ಖಮರುಝ್ಝಮಾನ್ ಗುಲ್ಬರ್ಗ ಹಾಗೂ ಸಯ್ಯಿದ್ ಸುಫ್ಯಾನ್ ಖಾದ್ರಿ ಮಾತನಾಡಿದರು.

ಎಸ್ಸೆಸ್ಸೆಫ್ ಗುಲ್ಬರ್ಗ ಜಿಲ್ಲೆಯ ಗೌರವಾಧ್ಯಕ್ಷರಾಗಿ ಮೌಲಾನಾ ಜಾವಿದ್ ರಝಾ ಹಝ್ರತ್, ಅಧ್ಯಕ್ಷರಾಗಿ ಮೌಲಾನಾ ಆಲಂ ಬರಕಾತಿ ಸಾಹೇಬ್, ಪ್ರಧಾನ ಕಾರ್ಯದರ್ಶಿಯಾಗಿ ಬದ್ರಝ್ಝಮಾನ್ ಹಾಗೂ ಕೋಶಾಧಿಕಾರಿಯಾಗಿ ಮುಹಮ್ಮದ್ ರಫೀಖುದ್ದೀನ್ ರವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಹಜ್ ಇರ್ಫಾನ್ ಹಾಗೂ ಕಾರ್ಯದರ್ಶಿಯಾಗಿ ಸಯ್ಯಿದ್ ಸುಫ್ಯಾನ್ ಖಾದ್ರಿ ರವರನ್ನೂ ಹಾಗೂ ಕಾರ್ಯಕಾರಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ