ರಿಯಾದ್: ಭಾರತದಿಂದ ಸೌದಿ ಅರೇಬಿಯಾಕ್ಕೆ ಶೀಘ್ರದಲ್ಲೇ ವಿಮಾನಗಳು ಪುನರಾರಂಭಗೊಳ್ಳಲಿವೆ ಎಂದು ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಹೇಳಿದ್ದಾರೆ.ಸೌದಿ ಅರೇಬಿಯಾದ ವಲಸಿಗ ಭಾರತೀಯರಿಗೆ ಶೀಘ್ರದಲ್ಲೇ ಸಂತಸದ ಮಾಹಿತಿ ನೀಡಲಾಗುವುದು ಎಂದು ರಿಯಾದ್ನ ಭಾರತೀಯ ರಾಯಭಾರ ಕಚೇರಿಯಲ್ಲಿ ನಡೆದ ಸಂವಿಧಾನ ದಿನದ ಸಮಾರಂಭದಲ್ಲಿ ಮಾತನಾಡಿದ ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಔಸಾಫ್ ಸಯೀದ್ ಹೇಳಿದರು.
ಭಾರತದಿಂದ ಸೌದಿ ಅರೇಬಿಯಾಕ್ಕೆ ವಿಮಾನಗಳು ಶೀಘ್ರದಲ್ಲೇ ಪುನರಾರಂಭಗೊಳ್ಳಲಿವೆ. ಇದಕ್ಕಾಗಿ ಮಾತುಕತೆ ನಡೆಯುತ್ತಿದೆ. ಶೀಘ್ರದಲ್ಲೇ ಶುಭ ಸುದ್ದಿ ನೀಡಲಾಗುವುದು ಎಂದು ರಾಯಭಾರಿ ಹೇಳಿದರು. ಆರೋಗ್ಯ ಸಚಿವರು, ನಾಗರಿಕ ವಿಮಾನಯಾನ ಅಧಿಕಾರಿಗಳು ಮತ್ತು ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಏರ್ ಬಬಲ್ ಗೆ ಸಹಿ ಹಾಕುವ ಪ್ರಯತ್ನಗಳು ನಡೆಯುತ್ತಿವೆ.
ವಿಮಾನ ಸೇವೆಗಳು ರದ್ದುಪಡಿಸಲಾಗಿರುವ ಕಾರಣ ಸೌದಿ ಅರೇಬಿಯಾಕ್ಕೆ ಮರಳಲು ಸಾಧ್ಯವಾಗದ ಭಾರತೀಯರ ಸಮಸ್ಯೆಯನ್ನು ಸೌದಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಮಾತುಕತೆಯ ಪರಿಣಾಮವಾಗಿ, ಭಾರತದಿಂದ ಆರೋಗ್ಯ ಕಾರ್ಯಕರ್ತರು ಸೌದಿ ಅರೇಬಿಯಾವನ್ನು ತಲುಪಲು ಸಮರ್ಥರಾಗಿದ್ದಾರೆ. ನಿಗದಿತ ದಿನದ ಕ್ವಾರಂಟೈನ್ ಇಲ್ಲದೆಯೇ ಅವರನ್ನು ಸೌದಿ ಅರೇಬಿಯಾಕ್ಕೆ ತರಲಾಗುತ್ತದೆ. ಮುಂದಿನ ಹಂತದಲ್ಲಿ ಸಾಮಾನ್ಯ ಕಾರ್ಮಿಕರು ಸೌದಿ ಅರೇಬಿಯಾವನ್ನು ತಲುಪಲು ಸಾಧ್ಯವಾಗಲಿದೆ ಎಂದು ಅವರು ಆಶಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ