SIC ಸೌದಿ ಅರೇಬಿಯಾ ಕೊಡಗು ವತಿಯಿಂದ ಎಸ್.ಕೆ .ಎಸ್ ಎಸ್.ಎಫ್ ಜಿಸಿಸಿ ಕೊಡಗು ಸಮಿತಿಯ ಸಹಯೋಗದೊಂದಿಗೆ ಜೀಲಾನಿ ದಿನ ಹಾಗೂ ಸಮಸ್ತದ ಅಗಲಿದ ಚೇತನಗಳ ಅನುಸ್ಮರಣಾ ಸಮಾರಂಭ ಸೌದಿ ಅರೇಬಿಯಾದ ರಿಯಾದ್ ಅಲ್ ಮಾಸ್ ಹೋಟೆಲಿನಲ್ಲಿ ನಡೆಯಿತು.
ಮುಖ್ಯ ಭಾಷಣಗಾರರಾಗಿ ಉಸ್ತಾದ್ ಕೋಯ ವಾಫಿ ವಯನಾಡ್ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಕೆ.ಎಸ್.ಎಸ್.ಎಫ್ ಸೌದಿ ಅರೇಬಿಯಾ ಕೊಡಗು ಅಧ್ಯಕ್ಷರಾದ ಝೈನುದ್ದೀನ್ ಉಸ್ತಾದ್ ವಹಿಸಿದ್ದರು. SIC ರಿಯಾದ್ ಸಮಿತಿಯ ಅಧ್ಯಕ್ಷರಾದ ಸೈದಲವಿ ಫೈಝಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
SIC ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ಜೊತೆ ಕಾರ್ಯದರ್ಶಿ ಅಸ್ಲಮ್ ಉಸ್ತಾದ್, ಸಂಘಟನಾ ಕಾರ್ಯದರ್ಶಿ ಝುಬೈರ್ ಹುದವಿ, SIC ಸೌದಿ ಉಪಾಧ್ಯಕ್ಷರಾದ ಅಬುಬಕರ್ ಫೈಝಿ ವೆಳ್ಳಿ ಲ,SIC ಕರ್ನಾಟಕ ಅಧ್ಯಕ್ಷರಾದ ಬಶೀರ್ ಅರಂಬೂರ್, ಸಿದ್ದೀಕ್ ಬಾಖವಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಹಿತ ನುಡಿಗಳನ್ನಾಡಿದರು.
ಅಬ್ದುಲ್ ಗಫೂರ್ ರಿಯಾದ್ ಕಾರ್ಯಕ್ರಮದಲ್ಲಿ ಗೀತೆಯನ್ನು ಹಾಡಿ ಎಲ್ಲರ ಗಮನ ಸೆಳೆದರು.
ಎಸ್.ಕೆ.ಎಸ್.ಎಸ್.ಎಫ್ ಜಿಸಿಸಿ ಕೊಡಗು ಹಾಗೂ SIC ಸೌದಿ ಅರೇಬಿಯಾ ಕೊಡಗು ಸಮಿತಿಯ ಹಲವು ನಾಯಕರುಗಳು ಹಾಗೂ ಸದಸ್ಯರುಗಳು ಝೂಮ್ ಆನ್ಲೈನ್ನಲ್ಲಿ ಕಾರ್ಯಕ್ರಮವನ್ನು ವೀಕ್ಷಿಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ SIC ಸಮಿತಿಯ ನೇತಾರರು ಹಾಗೂ ಎಸ್.ಕೆ.ಎಸ್.ಎಸ್.ಎಫ್ ಸೌದಿ ಅರೇಬಿಯಾ ಕೊಡಗು ಸದಸ್ಯರುಗಳು ಭಾಗವಹಿಸಿದ್ದರು.
ಎಸ್.ಕೆ.ಎಸ್.ಎಸ್.ಎಫ್ ಜಿಸಿಸಿ ಕೊಡಗು ಕೋಶಾಧಿಕಾರಿ ಅಬ್ದುಲ್ ರಝಾಕ್ ಫೈಝಿ ಸ್ವಾಗತಿಸಿ, ಅಶ್ರಫ್ ಎಮ್ಮೆಮಾಡು ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ