ಬೆಳ್ತಂಗಡಿ,ಡಿ.19: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಉಜಿರೆಯ ಬಾಲಕನ ಅಪಹರಣ ಪ್ರಕರಣ ಸುಖಾಂತ ಕಂಡಿದೆ. ಎಂಟು ವರ್ಷದ ಬಾಲಕ ಅನುಭವ್ ಅಪಹರಣ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳನ್ನು ಕೋಲಾರದಲ್ಲಿ ಪೋಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಮಂಡ್ಯದ ಗಂಗಾಧರ್, ಎಲೆಕ್ಟ್ರಾನಿಕ್ ಸಿಟಿಯ ಕೋಮಲ್ ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದೆ. ಬಂಧಿತರನ್ನು ಇಂದು ಬೆಳಿಗ್ಗೆ ಕೋಲಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯ ಕೂರ್ನಹೊಸಳ್ಳಿ ಗ್ರಾಮದಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು ಗ್ರಾಮದ ಮಂಜುನಾಥ್ ಎಂಬುವರ ಮನೆಯಲ್ಲಿದ್ದ ಬಾಲಕನನ್ನು ರಕ್ಷಿಸಲಾಗಿದೆ.
ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ಸಹಾಯದೊಡನೆ ಮಂಗಳೂರು ಪೋಲೀಸ್ ವಿಶೇಷ ತಂಡ ಈ ಪ್ರಕರಣವನ್ನು ಬೇಧಿಸಿದೆ.
ಘಟನೆ ವಿವರ
ಕಳೆದ ಗುರುವಾರ ಸಂಜೆ ಮನೆಯ ಹೊರಗೆ ರಸ್ತೆ ಬದಿ ಆಡುತ್ತಿದ್ದ ಸ್ಥಳೀಯ ಉದ್ಯಮಿಯ ಪುತ್ರ, ಬಾಲಕ ಅನುಭವ್ ನನ್ನು ಇಂಡಿಕಾ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅಪಹರಿಸಿದ್ದರು. ಅವರು ಬಾ;ಅಕನ ಪೋಷಕರಿಗೆ ಕರೆ ಮಾಡಿ 17ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ಮೊತ್ತವನ್ನು ನಗದು ಅಥವಾ ಚೆಕ್ ಮೂಲಕ ನೀಡದೆ ಬಿಟ್ ಕಾಯಿನ್ ಮೂಲಕ ನೀಡುವಂತೆ ಅಪಹರಣಕಾರರು ಒತ್ತಾಯಿಸಿದ್ದರು.
ಈ ಕುರಿತು ಬಾಲಕನ ಅಜ್ಜ ಎ ಕೆ ಶಿವನ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಬಾಲಕನ ಅಪಹರಣ ಪ್ರಕರಣ ಉಜಿರೆ ಮಾತ್ರವಲ್ಲ ದಕ್ಷಿಣ ಕನ್ನಡ ಹಾಗೂ ರಾಜ್ಯಾದ್ಯಂತ ವ್ಯಾಪಕ ಆತಂಕಕ್ಕೆ ಕಾರಣವಾಗಿತ್ತು.
















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್