ದುಬೈ: ರಾಜಕೀಯ ಪ್ರವೇಶಿಸುವ ಉದ್ದೇಶ ಹೊಂದಿಲ್ಲ, ಸೋಷಿಯಲ್ ಮೀಡಿಯಾದಲ್ಲಿ ತನ್ನ ವಿರುದ್ಧದ ಅಪವಾದ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಲುಲು ಗ್ರೂಪ್ ಅಧ್ಯಕ್ಷ ಎಂ.ಎ.ಯೂಸುಫಲಿ ಹೇಳಿದ್ದಾರೆ.ಅವರು ದುಬೈನಲ್ಲಿ ಆನ್ಲೈನ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಸೋಶಿಯಲ್ ಮೀಡಿಯಾದಲ್ಲಿ ಈ ರೀತಿ ಅಪವಾದವನ್ನು ಹರಡುವ ಬೇರೆ ರಾಜ್ಯವನ್ನು ನೋಡಿಲ್ಲ,ನಕಾರಾತ್ಮಕತೆಯನ್ನು ಹರಡುವುದು ಕೆಲವರ ಅಭ್ಯಾಸವಾಗಿ ಮಾರ್ಪಟ್ಟಿದೆ. ಭಾರತದ ಸಂವಿಧಾನದ ಪ್ರಕಾರ ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿದೆ. ಆದರೆ, ಇದು ಇತರರ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ರೂಪದಲ್ಲಾಗಿರಬಾರದು ಎಂದು ಎಂ.ಎ.ಯೂಸುಫಲಿ ಹೇಳಿದರು.
ಇಂತಹಾ ಅಪವಾದಗಳು ವೈಯಕ್ತಿಕವಾಗಿ ತನಗೆ ಯಾವುದೇ ಪರಿಣಾಮ ಬೀರುವುದಿಲ್ಲ, ಆದರೆ 5 ಲಕ್ಷಕ್ಕೂ ಮಿಕ್ಕ ಉದ್ಯೋಗಿಗಳಿಗೆ ನೋವುಂಟು ಮಾಡುತ್ತದೆ. ಆದ್ದರಿಂದ ಕಾನೂನುಬದ್ಧವಾಗಿ ಅದನ್ನು ಎದುರಿಸಲಾಗುವುದು ಎಂದು ಅವರು ತಿಳಿಸಿದರು.
ಕೋವಿಡ್ ಕಾಲದಲ್ಲಿ, ಲುಲು ಗ್ರೂಪ್ ಇ-ಕಾಮರ್ಸ್ನಲ್ಲಿ ಶೇಕಡಾ 200 ರಷ್ಟು ಬೆಳವಣಿಗೆಯನ್ನು ಕಂಡಿದೆ. ಮುಂದಿನ ವರ್ಷ ಇದನ್ನು ಶೇ 500 ರಷ್ಟು ಹೆಚ್ಚಿಸುವ ಗುರಿ ಹೊಂದಿದೆ. ಕೋವಿಡ್ ಬಿಕ್ಕಟ್ಟಿನ ನಡುವೆಯೂ ಲುಲು ಗ್ರೂಪ್ 27 ಹೊಸ ಯೋಜನೆಗಳನ್ನು ಪೂರ್ಣಗೊಳಿಸಿದೆ ಎಂದು ಯೂಸುಫಲಿ ಹೇಳಿದರು.
ಯಾವುದೇ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಆಡಳಿತ ಮಂಡಳಿಯನ್ನು ಅರ್ಹ ಗೌರವದಿಂದ ನೋಡಬೇಕು. ಅದು ಪ್ರಜಾಪ್ರಭುತ್ವ ಮರ್ಯಾದೆಯಾಗಿದೆ. ಆದಾಗ್ಯೂ, ತನಗೆ ಹಾಗೂ ತನ್ನ ಸಂಸ್ಥೆಗಳಿಗೆ ಯಾವುದೇ ರಾಜಕೀಯ ಗುರಿಗಳಿಲ್ಲ ಎಂದು ಸ್ಪಷ್ಟಪಡಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು