ದುಬೈ: ರಾಜಕೀಯ ಪ್ರವೇಶಿಸುವ ಉದ್ದೇಶ ಹೊಂದಿಲ್ಲ, ಸೋಷಿಯಲ್ ಮೀಡಿಯಾದಲ್ಲಿ ತನ್ನ ವಿರುದ್ಧದ ಅಪವಾದ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಲುಲು ಗ್ರೂಪ್ ಅಧ್ಯಕ್ಷ ಎಂ.ಎ.ಯೂಸುಫಲಿ ಹೇಳಿದ್ದಾರೆ.ಅವರು ದುಬೈನಲ್ಲಿ ಆನ್ಲೈನ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಸೋಶಿಯಲ್ ಮೀಡಿಯಾದಲ್ಲಿ ಈ ರೀತಿ ಅಪವಾದವನ್ನು ಹರಡುವ ಬೇರೆ ರಾಜ್ಯವನ್ನು ನೋಡಿಲ್ಲ,ನಕಾರಾತ್ಮಕತೆಯನ್ನು ಹರಡುವುದು ಕೆಲವರ ಅಭ್ಯಾಸವಾಗಿ ಮಾರ್ಪಟ್ಟಿದೆ. ಭಾರತದ ಸಂವಿಧಾನದ ಪ್ರಕಾರ ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿದೆ. ಆದರೆ, ಇದು ಇತರರ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ರೂಪದಲ್ಲಾಗಿರಬಾರದು ಎಂದು ಎಂ.ಎ.ಯೂಸುಫಲಿ ಹೇಳಿದರು.
ಇಂತಹಾ ಅಪವಾದಗಳು ವೈಯಕ್ತಿಕವಾಗಿ ತನಗೆ ಯಾವುದೇ ಪರಿಣಾಮ ಬೀರುವುದಿಲ್ಲ, ಆದರೆ 5 ಲಕ್ಷಕ್ಕೂ ಮಿಕ್ಕ ಉದ್ಯೋಗಿಗಳಿಗೆ ನೋವುಂಟು ಮಾಡುತ್ತದೆ. ಆದ್ದರಿಂದ ಕಾನೂನುಬದ್ಧವಾಗಿ ಅದನ್ನು ಎದುರಿಸಲಾಗುವುದು ಎಂದು ಅವರು ತಿಳಿಸಿದರು.
ಕೋವಿಡ್ ಕಾಲದಲ್ಲಿ, ಲುಲು ಗ್ರೂಪ್ ಇ-ಕಾಮರ್ಸ್ನಲ್ಲಿ ಶೇಕಡಾ 200 ರಷ್ಟು ಬೆಳವಣಿಗೆಯನ್ನು ಕಂಡಿದೆ. ಮುಂದಿನ ವರ್ಷ ಇದನ್ನು ಶೇ 500 ರಷ್ಟು ಹೆಚ್ಚಿಸುವ ಗುರಿ ಹೊಂದಿದೆ. ಕೋವಿಡ್ ಬಿಕ್ಕಟ್ಟಿನ ನಡುವೆಯೂ ಲುಲು ಗ್ರೂಪ್ 27 ಹೊಸ ಯೋಜನೆಗಳನ್ನು ಪೂರ್ಣಗೊಳಿಸಿದೆ ಎಂದು ಯೂಸುಫಲಿ ಹೇಳಿದರು.
ಯಾವುದೇ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಆಡಳಿತ ಮಂಡಳಿಯನ್ನು ಅರ್ಹ ಗೌರವದಿಂದ ನೋಡಬೇಕು. ಅದು ಪ್ರಜಾಪ್ರಭುತ್ವ ಮರ್ಯಾದೆಯಾಗಿದೆ. ಆದಾಗ್ಯೂ, ತನಗೆ ಹಾಗೂ ತನ್ನ ಸಂಸ್ಥೆಗಳಿಗೆ ಯಾವುದೇ ರಾಜಕೀಯ ಗುರಿಗಳಿಲ್ಲ ಎಂದು ಸ್ಪಷ್ಟಪಡಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ