ಉತ್ತರಪ್ರದೇಶದ ಪ್ರತಾಪ್ ಗರಿನ ಅಯ್ಯೂಬ್ ಖಾನ್ ರವರು ಸೌದಿ ಅರೇಬಿಯಾದ ತ್ವಾಯಿಫ್ ನಲ್ಲಿ ಡಿಸೆಂಬರ್ 20ರಂದು ಮಧ್ಯಾಹ್ನ ನಿಧನರಾಗಿದ್ದಾರೆ.
ಕಳೆದ ಒಂದು ತಿಂಗಳ ಕಾಲ ತಲೆಯ ನರದ ತೊಂದರೆಯಿಂದ ಆಸ್ಪತ್ರೆಯಲ್ಲಿದ್ದ ಅವರಿಗೆ ಒಂದು ಶಸ್ತ್ರಚಿಕಿತ್ಸೆಯೂ ನಡೆದಿತ್ತು. ನಿಧನರಾದ ಸಂದರ್ಭದಲ್ಲಿ ಅಯ್ಯೂಬ್ ಖಾನ್ ರವರ ಸಹೋದರ ಇಸ್ತಿಕ್ಕಾರ್ ಅಹ್ಮದ್ ರವರು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ತ್ವಾಯಿಫ್ ಸೆಕ್ಟರ್ ಅಧ್ಯಕ್ಷರಾದ ಇಖ್ಬಾಲ್ ಮದನಿ ರವರಿಗೆ ಕರೆ ಮಾಡಿ ವಿಷಯ ತಿಳಿಸಿದರು. ಅದರಂತೆ ಇಖ್ಬಾಲ್ ಮದನಿಯವರು ಮದೀನಾ ಕೆಸಿಎಫ್ ಕಾರ್ಯಕರ್ತನಾದ ರಝ್ಝಾಕ್ ಉಳ್ಳಾಲರವರನ್ನು ಸಂಪರ್ಕಿಸಿ ಅವರ ಸಹಕಾರದೊಂದಿಗೆ ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿದರು.
ಭಾರತದ ರಾಯಭಾರಿ ಕಛೇರಿ, ತ್ವಾಯಿಫ್ ಪೋಲಿಸ್ ಠಾಣೆ ಹಾಗೂ ಆಸ್ಪತ್ರೆಯಿಂದ ಬೇಕಾದ ಕಾಗದಗಳು ಸಿಕ್ಕಿದ ನಂತರ ಕೆಸಿಎಫ್ ಕಾರ್ಯಕರ್ತರ ನೇತೃತ್ವದಲ್ಲಿ ಅಂತ್ಯ ಸಂಸ್ಕಾರಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿ ಡಿಸೆಂಬರ್ 22ರಂದು ಅಸರ್ ನಮಾಝಿನ ಬಳಿಕ ತ್ವಾಯಿಫ್ ನಲ್ಲಿರುವ ಅಬ್ಬಾಸಿಯ್ಯಾ ದಫನ ಭೂಮಿಯಲ್ಲಿ ಮಯ್ಯತ್ ದಫನ ಮಾಡಲಾಯಿತು.
ಅಂತ್ಯಸಂಸ್ಕಾರದ ಸಮಯದಲ್ಲಿ ಅಯ್ಯೂಬ್ ಖಾನ್ ರವರ ಸಹೋದರ ಇಸ್ತಿಕ್ಕಾರ್ ಅಹ್ಮದ್, ಊರಿನವರಾದ ಬಶೀರ್ ಅಹ್ಮದ್, ಖಲೀಲ್ ಹನೀಫ್ ಹಾಗೂ ಕುಟುಂಬದವರು ಸೇರಿದ್ದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ