ಉತ್ತರಪ್ರದೇಶದ ಪ್ರತಾಪ್ ಗರಿನ ಅಯ್ಯೂಬ್ ಖಾನ್ ರವರು ಸೌದಿ ಅರೇಬಿಯಾದ ತ್ವಾಯಿಫ್ ನಲ್ಲಿ ಡಿಸೆಂಬರ್ 20ರಂದು ಮಧ್ಯಾಹ್ನ ನಿಧನರಾಗಿದ್ದಾರೆ.
ಕಳೆದ ಒಂದು ತಿಂಗಳ ಕಾಲ ತಲೆಯ ನರದ ತೊಂದರೆಯಿಂದ ಆಸ್ಪತ್ರೆಯಲ್ಲಿದ್ದ ಅವರಿಗೆ ಒಂದು ಶಸ್ತ್ರಚಿಕಿತ್ಸೆಯೂ ನಡೆದಿತ್ತು. ನಿಧನರಾದ ಸಂದರ್ಭದಲ್ಲಿ ಅಯ್ಯೂಬ್ ಖಾನ್ ರವರ ಸಹೋದರ ಇಸ್ತಿಕ್ಕಾರ್ ಅಹ್ಮದ್ ರವರು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ತ್ವಾಯಿಫ್ ಸೆಕ್ಟರ್ ಅಧ್ಯಕ್ಷರಾದ ಇಖ್ಬಾಲ್ ಮದನಿ ರವರಿಗೆ ಕರೆ ಮಾಡಿ ವಿಷಯ ತಿಳಿಸಿದರು. ಅದರಂತೆ ಇಖ್ಬಾಲ್ ಮದನಿಯವರು ಮದೀನಾ ಕೆಸಿಎಫ್ ಕಾರ್ಯಕರ್ತನಾದ ರಝ್ಝಾಕ್ ಉಳ್ಳಾಲರವರನ್ನು ಸಂಪರ್ಕಿಸಿ ಅವರ ಸಹಕಾರದೊಂದಿಗೆ ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿದರು.
ಭಾರತದ ರಾಯಭಾರಿ ಕಛೇರಿ, ತ್ವಾಯಿಫ್ ಪೋಲಿಸ್ ಠಾಣೆ ಹಾಗೂ ಆಸ್ಪತ್ರೆಯಿಂದ ಬೇಕಾದ ಕಾಗದಗಳು ಸಿಕ್ಕಿದ ನಂತರ ಕೆಸಿಎಫ್ ಕಾರ್ಯಕರ್ತರ ನೇತೃತ್ವದಲ್ಲಿ ಅಂತ್ಯ ಸಂಸ್ಕಾರಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿ ಡಿಸೆಂಬರ್ 22ರಂದು ಅಸರ್ ನಮಾಝಿನ ಬಳಿಕ ತ್ವಾಯಿಫ್ ನಲ್ಲಿರುವ ಅಬ್ಬಾಸಿಯ್ಯಾ ದಫನ ಭೂಮಿಯಲ್ಲಿ ಮಯ್ಯತ್ ದಫನ ಮಾಡಲಾಯಿತು.
ಅಂತ್ಯಸಂಸ್ಕಾರದ ಸಮಯದಲ್ಲಿ ಅಯ್ಯೂಬ್ ಖಾನ್ ರವರ ಸಹೋದರ ಇಸ್ತಿಕ್ಕಾರ್ ಅಹ್ಮದ್, ಊರಿನವರಾದ ಬಶೀರ್ ಅಹ್ಮದ್, ಖಲೀಲ್ ಹನೀಫ್ ಹಾಗೂ ಕುಟುಂಬದವರು ಸೇರಿದ್ದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ