ಹೈದರಾಬಾದ್: ಲವ್ ಜಿಹಾದ್ ವಿರುದ್ಧ ಬಿಜೆಪಿ ಆಡಳಿತವಿರುವ ರಾಜ್ಯ ಸರ್ಕಾರಗಳು ಕಾನೂನು ರೂಪಿಸುತ್ತಿರುವುದಕ್ಕೆ, ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಒವೈಸಿ ವಿರೋಧ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಒವೈಸಿ, ಸಂವಿಧಾನದಲ್ಲಿ ಲವ್ ಜಿಹಾದ್ ಬಗ್ಗೆ ಯಾವುದೇ ವ್ಯಾಖ್ಯಾನವಿಲ್ಲ. ಆದರೆ ಬಿಜೆಪಿ ಕೇವಲ ರಾಜಕೀಯ ಲಾಭಕ್ಕಾಗಿ ಲವ್ ಜಿಹಾದ್ ಪದವನ್ನು ಸೃಷ್ಟಿಸಿದೆಯಲ್ಲದೇ, ಅದರ ವಿರುದ್ಧ ಕಾನೂನು ರೂಪಿಸುವ ನಾಟಕವಾಡುತ್ತಿದೆ ಎಂದು ಒವೈಸಿ ಹರಿಹಾಯ್ದಿದ್ದಾರೆ.
ಲವ್ ಜಿಹಾದ್ ವಿರುದ್ಧ ಬಿಜೆಪಿ ಆಡಳಿತವಿರುವ ರಾಜ್ಯಗಳು ಕಾನೂನು ರೂಪಿಸುವ ಮೂಲಕ ಸಂವಿಧಾನವನ್ನು ಅವಮಾನಿಸುತ್ತಿವೆ. ಅಸ್ತಿತ್ವದಲ್ಲೇ ಇಲ್ಲದ ಅಪರಾಧಕ್ಕೆ ಕಾನೂನು ರೂಪಿಸುವ ಮೂಲಕ ಬಿಜೆಪಿ ಸಂವಿಧಾನಕ್ಕೆ ಅಪಚಾರ ಎಸಗುತ್ತಿದೆ ಎಂದು ಒವೈಸಿ ಗಂಭೀರ ಆರೋಪ ಮಾಡಿದರು.
ಒಂದು ವೇಳೆ ಬಿಜೆಪಿಗೆ ಕಾನೂನು ಮಾಡಲೇಬೇಕಿದ್ದರೆ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ) ಕುರಿತು ಮಾಡಲಿ, ಉದ್ಯೋಗ ಸೃಷ್ಟಿಗಾಗಿ ಕಾನೂನು ತರಲಿ ಎಂದು ಆಗ್ರಹಿಸಿದ ಒವೈಸಿ, ರಾಜಕೀಯ ಲಾಭದ ಕುರಿತು ಚಿಂತಿಸುವುದನ್ನು ಬಿಟ್ಟು ಜ್ವಲಂತ ಸಮಸ್ಯೆಗಳ ಕುರಿತು ಬಿಜೆಪಿ ಚಿಂತಿಸಲಿ ಎಂದು ಒತ್ತಾಯಿಸಿದರು.
ಉತ್ತರಪ್ರದೇಶ, ಮಧ್ಯಪ್ರದೇಶದಲ್ಲಿ ಈಗಾಗಲೇ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿ ಮಾಡಲಾಗಿದ್ದು, ಕರ್ನಾಟಕವೂ ಸೇರಿದಂತೆ ಬಿಜೆಪಿ ಆಡಳಿತ ಇರುವ ಇತರ ರಾಜ್ಯಗಳು ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ದಟ್ಟವಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಲವ್ ಜಿಹಾದ್ ಪ್ರಸ್ತಾಪ ಬಿಜೆಪಿ ಹಾಗೂ ಎಐಎಂಐಎಂ ಎರಡೂ ಪಕ್ಷಗಳಿಗೆ ಮುಖ್ಯವಾಗಲಿದೆ. ಬಿಜೆಪಿ ಲವ್ ಜಿಹಾದ್ ವಿರುದ್ಧ ಧ್ವನಿ ಎತ್ತಲಿದ್ದರೆ, ಎಐಎಂಐಎಂ ಲವ್ ಜಿಹಾದ್ ಎಂಬುದು ಬಿಜೆಪಿ ಸೃಷ್ಟಿ ಎಂದು ಪ್ರಚಾರ ಮಾಡಲಿರುವುದು ಖಚಿತ.
















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ