ನವದೆಹಲಿ ,ಡಿ. 31: ನವದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನ ನಿನ್ನೆ ಸಂಜೆ ಇಂದೋರ್ನಲ್ಲಿ ತುರ್ತಾಗಿ ಲ್ಯಾಂಡ್ ಆಗಿದೆ. ಆ ವಿಮಾನದಲ್ಲಿದ್ದ ಕಂದಮ್ಮನಿಗೆ ಉಸಿರಾಟದ ತೊಂದರೆ (hydrocephalus) ಕಾಣಿಸಿಕೊಂಡಿದ್ದರಿಂದ ಆ ಮಗುವಿನ ಪೋಷಕರು ಪೈಲಟ್ಗೆ ವಿಷಯ ತಿಳಿಸಿದರು. ಹೀಗಾಗಿ, ಮಗುವಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸುವ ಸಲುವಾಗಿ ಇಂದೋರ್ನಲ್ಲೇ Indigo ವಿಮಾನವನ್ನು ಇಳಿಸಲಾಯಿತು. ಆದರೂ ಆ ಮಗುವನ್ನು ಬದುಕಿಸಲು ಸಾಧ್ಯವಾಗಲಿಲ್ಲ. ವಿಮಾನ ಲ್ಯಾಂಡ್ ಆಗುವ ಮೊದಲೇ ಮಗು ಸಾವನ್ನಪ್ಪಿತ್ತು.
ನಿನ್ನೆ ಸಂಜೆ ಇಂಡಿಗೋ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ದಂಪತಿಯ 7 ತಿಂಗಳ ಗಂಡು ಮಗುವಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಹೈಡ್ರೋಸೆಫಲಸ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ಬೇಕಾಗಿತ್ತು. ಹೀಗಾಗಿ, ಪೈಲಟ್ಗೆ ವಿಷಯ ತಿಳಿಸಲಾಯಿತು. ನಿನ್ನೆ ಸಂಜೆ 5.55ಕ್ಕೆ ಬೆಂಗಳೂರಿಗೆ ಹೊರಟಿದ್ದ ವಿಮಾನವನ್ನು ಇಂದೋರ್ನಲ್ಲಿಯೇ ಇಳಿಸಲಾಯಿತು. ತಕ್ಷಣ ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ನಲ್ಲಿ ಮಗುವನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಷ್ಟರಲ್ಲಿ ಮಗುವಿನ ಉಸಿರಾಟ ನಿಂತಿತ್ತು.
ಗೋರಖ್ಪುರ ಮೂಲದ ದುರ್ಗೇಶ್ ಜೈಸ್ವಾಲ್ ಮತ್ತು ಅನು ಜೈಸ್ವಾಲ್ ಅವರ 7 ತಿಂಗಳ ಮಗ ದೇವ್ ಜೈಸ್ವಾಲ್ಗೆ ವಿಮಾನದಲ್ಲಿ ತೀವ್ರ ಅನಾರೋಗ್ಯ ಕಾಣಿಸಿಕೊಂಡಿತ್ತು. ಆ ಮಗುವನ್ನು ಉಳಿಸಲು ಪೈಲಟ್ ಬೆಂಗಳೂರಿನ ಬದಲು ಇಂದೋರ್ನಲ್ಲೇ ವಿಮಾನವನ್ನು ಲ್ಯಾಂಡ್ ಮಾಡಿದರು. ಆದರೂ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ. ಆಸ್ಪತ್ರೆಗೆ ಕೊಂಡೊಯ್ಯುವ ಮೊದಲೇ ಮಗು ಸಾವನ್ನಪ್ಪಿತು.
ವಿಪರ್ಯಾಸವೆಂದರೆ, hydrocephalus ಎಂಬ ಮೆದುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿಗೆ ಚಿಕಿತ್ಸೆ ಕೊಡಿಸಲೆಂದೇ ಪೋಷಕರು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದರು. ಆದರೆ, ಮಾರ್ಗಮಧ್ಯದಲ್ಲೇ ಮಗು ಸಾವನ್ನಪ್ಪಿತು.
















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ