ಹೂವಿನ ಹಡಗಲಿ : ಮಸ್ದರ್ ಎಜ್ಯು ಆಂಡ್ ಚಾರಿಟಿಯ ವತಿಯಿಂದ ಅನಾಥ ನಿರ್ಗತಿಕ ಮಕ್ಕಳಿಗೆ ಧಾರ್ಮಿಕ ಹಾಗೂ ಆಧುನಿಕ ಶಿಕ್ಷಣವನ್ನು ಉಚಿತವಾಗಿ ನೀಡುವ ತದ್ರೀಸ್ ನಝೀರ್ ನಗರದ ವಾಲ್ಮೀಕಿ ಭವನದ ಸಮೀಪ ನಡೆದ ಕಾರ್ಯಕ್ರಮದಲ್ಲಿ ಇಂದು ಚಾಲನೆ ನೀಡಲಾಯಿತು.

ಹೂವಿನ ಹಡಗಲಿ ಪುರಸಭೆ ಅಧ್ಯಕ್ಷರಾದ ಶ್ರೀ ವಾರದ ಗೌಸ್ ಮೊಹಿದ್ದೀನ್ ಸಾಹೇಬರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಾಜಿ ಸಚಿವ, ಹೂವಿನ ಹಡಗಲಿ ಶಾಸಕರಾದ ಪಿಟಿ ಪರಮೇಶ್ವರ್ ನಾಯ್ಕ್ ಉದ್ಘಾಟಿಸಿದರು.
ಸಂಸ್ಥೆಯ ಪ್ರಧಾನ ಕಛೇರಿಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಉಪಾಧ್ಯಕ್ಷ, ಅಲ್ ಖಾದಿಸ ಕಾವಳಕಟ್ಟೆ ಇದರ ಚೇರ್ಮನ್ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ಸಮಾರಂಭದಲ್ಲಿ ಮುಖ್ಯ ಭಾಷಣವನ್ನು ಮಾಡಿದರು.

ಮಸ್ದರ್ ಕಾರ್ಯಾಧ್ಯಕ್ಷ ಮೌಲಾನಾ ಅಬೂ ಸುಫ್ಯಾನ್ ಮದನಿ ಹಾಗೂ ಮೌಲಾನಾ ಮುಫ್ತಿ ರೋಶನ್ ಝಮೀರ್ ಹೊಸಪೇಟೆ ಭಾಷಣ ಮಾಡಿದರು.ಸಂಸ್ಥೆಯ ಪ್ರಾಂಶುಪಾಲರಾದ ಸಯ್ಯಿದ್ ಯೂಸುಫ್ ನವಾಝ್ ಅಲ್ ಹುಸೈನಿ ಉಡುಪಿ, ಮನ್ಸೂರ್ ಹುಸೈನ್ ಹೊಸಪೇಟೆ, ಇಬ್ರಾಹಿಂ ಪಟ್ಟಾಡಿ ಮೂಡುಬಿದಿರೆ, ಸಂಸ್ಥೆಯ ಜನರಲ್ ಮ್ಯಾನೇಜರ್ ಸಿದ್ದೀಕ್ ಸಖಾಫಿ, ಸಿನಾನ್ ಸಖಾಫಿ, ಅನಸ್ ಅಹ್ಸನಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಫಿಝ್ ಸುಫ್ಯಾನ್ ಸಖಾಫಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್