ದುಬೈ: ಕೋವಿಡ್-19 ಕಾರಣದಿಂದ ಸೌದಿ ಅರೇಬಿಯಾ ತಲುಪಲು ಅಸಾಧ್ಯವಾದ ಕಾರಣ ಯುಎಇ ಮೂಲಕ ಹೋಗಲು ದುಬೈ ತಲುಪಿದ್ದ ಹಲವಾರು ಭಾರತೀಯರನ್ನು ಕೆಸಿಎಫ್ ಯುಎಇ ತಂಡವು ಎರಡು ಬಸ್ ವ್ಯವಸ್ಥೆಗೊಳಿಸಿ ದಮ್ಮಾಮ್ ಮತ್ತು ರಿಯಾದ್ ಗೆ ತಲುಪಿಸಿಕೊಡುವಲ್ಲಿ ಯಶಸ್ವಿಯಾಗಿದೆ.
ಕೆಸಿಎಫ್ ಯುಎಇ ರಾಷ್ಟ್ರೀಯ ಅಧ್ಯಕ್ಷ ಅಬ್ದುಲ್ ಜಲೀಲ್ ನಿಝಾಮಿ ಎಮ್ಮೆಮಾಡು, ಕೆಸಿಎಫ್ ದುಬೈ ನಾರ್ತ್ ಝೋನ್ ಅಧ್ಯಕ್ಷರಾದ ಇಸ್ಮಾಯಿಲ್ ಮದನಿನಗರ ಸೇರಿದಂತೆ ಹಲವು ನಾಯಕರು ನೇತೃತ್ವ ನೀಡಿದ್ದರು.

ಅನಿವಾಸಿ ಭಾರತೀಯರ ಸಂಕಷ್ಟಗಳಿಗೆ ಮಿಡಿಯುವ ಕರ್ನಾಟಕ ಕಲ್ಚರಲ್ ಫೌಂಡೇಶನ್ ಯುಎಇಯು ಕೋವಿಡ್-19 ಸಂದರ್ಭದಲ್ಲಿ ಹತ್ತರಷ್ಟು ಚಾರ್ಟರ್ ವಿಮಾನ ವ್ಯವಸ್ಥೆಗೊಳಿಸುವ ಮೂಲಕ ಸಂಕಷ್ಟಕ್ಕೊಳಗಾದ ಎರಡು ಸಾವಿರದಷ್ಟು ಅನಿವಾಸಿ ಕನ್ನಡಿಗರನ್ನು ತಾಯ್ನಾಡಿಗೆ ತಲುಪಿಸಿಕೊಡುವಲ್ಲಿ ಯಶಸ್ವಿಯಾಗಿತ್ತು.
ಗಲ್ಫ್ ಮತ್ತು ಯೂರೋಪ್ ರಾಷ್ಟ್ರಗಳಲ್ಲಿ ಅನಿವಾಸಿ ಕನ್ನಡಿಗರ ಭರವಸೆಯ ಬೆಳಕಾಗಿ ಕೆಸಿಎಫ್ ಕಾರ್ಯಾಚರಿಸುತ್ತಿದ್ದು ಸಾಮಾಜಿಕ ಶೈಕ್ಷಣಿಕ ಸಾಮುದಾಯಿಕ ಕಾರ್ಯಯೋಜನೆಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ಕೆಸಿಎಫ್ ಉತ್ತಮವಾದ ಸಂಘಟನಾ ನೆಟ್ವರ್ಕ್ ಹೊಂದಿದ್ದು ಯುಎಇಯ ಎಲ್ಲಾ ಎಮಿರೇಟ್ಸ್ ಗಳಲ್ಲೂ 24/7 ಕಾರ್ಯಕರ್ತರು ಸಹಾಯಕ್ಕೆ ಸಜ್ಜಾಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ