ಚಾಮರಾಜನಗರ: ಶಾಲಾ ಕಾಲೇಜುಗಳ ಪಠ್ಯ ಪುಸ್ತಕಗಳಲ್ಲಿ ಶೇಕಡ 30ರಷ್ಟು ಕಡಿತ ಮಾಡಲಾಗುವುದು. ಇಂದು ಸಂಜೆ ಶಿಕ್ಷಣ ಆಯುಕ್ತರಿಂದ ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದ ಬಳಿಕ ಚಾಮರಾಜನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಖಾಸಗಿ ಶಾಲೆಗಳ ಶುಲ್ಕದ ಬಗ್ಗೆ ಜನವರಿ 15 ರ ನಂತರ ತಜ್ಞರ ಅಭಿಪ್ರಾಯ ಪಡೆಯಲಾಗುವುದು. ತಜ್ಞರ ಮಾಹಿತಿ ಆಧರಿಸಿ ಶಾಲಾ ಕಾಲೇಜುಗಳ ಶುಲ್ಕ ನಿಗದಿಪಡಿಸಲಾಗುವುದು ಎಂದರು.
ಈಗಾಗಲೇ ಕೆಲವು ಖಾಸಗಿ ಸಂಸ್ಥೆಗಳು ಶೇಕಡ 30ರಷ್ಟು ಶುಲ್ಕ ಖಡಿತಗೊಳಿಸಲು ಮುಂದೆ ಬಂದಿವೆ. ಶುಲ್ಕ ಹೆಚ್ಚು ಕಡಿತಗೊಳಿಸಿದರೆ ಶಿಕ್ಷಕರು, ಉಪನ್ಯಾಸಕರ ವೇತನಕ್ಕೂ ತೊಂದರೆ ಆಗಲಿದೆ. ಇತ್ತ ಪೂರ್ತಿ ಶುಲ್ಕ ತುಂಬಲು ಪೋಷಕರಿಗೆ ಹೊರೆ ಆಗಲಿದೆ. ಶಿಕ್ಷಣ ಸಂಸ್ಥೆ ಮತ್ತು ಪೋಷಕರನ್ನು ಗಮನದಲ್ಲಿ ಇಟ್ಟು ಕೊಂಡು ಶುಲ್ಕ ನಿಗದಿ ಮಾಡಲಾಗುವುದ ಎಂದು ಸಚಿವರು ಹೇಳಿದರು.
ಒಂದನೇ ತರಗತಿಯಿಂದ ಮಾಮೂಲಿ ತರಗತಿ ಆರಂಭಿಸುವ ಕುರಿತು ಜ. 15ರ ನಂತರ ತಜ್ಞರು ನೀಡುವ ವರದಿ ಬಳಿಕ ತೀರ್ಮಾನ ಮಾಡುತ್ತೇವೆ ಎಂದು ಸುರೇಶ್ ಕುಮಾರ್ ಹೇಳಿದರು.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ