ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಪ್ರಾಯೋಜಕತ್ವದಲ್ಲಿ ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದಲ್ಲಿ ಕಾಮಗಾರಿ ಪೂರ್ಣಗೊಂಡ ಇಹ್ಸಾನ್ ಸೆಂಟರ್ ಜನವರಿ 17 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಸದ್ರಿ ಕಾರ್ಯಕ್ರಮದಲ್ಲಿ ಇಹ್ಸಾನ್ ಸಮಿತಿಯ ದಶ ವಾರ್ಷಿಕ ಘೋಷಣೆಯೂ ನಡೆಯಲಿದೆ.
ಇಹ್ಸಾನ್ ಕರ್ನಾಟಕ ಸಮಿತಿ ಚೇರ್ಮಾನ್ ಮೌಲಾನಾ ಎನ್ ಕೆ ಎಂ ಶಾಫೀ ಸಅದಿ ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಪ್ರಸಾದ್ ಅಬ್ಬಯ್ಯಾ ರವರು ಉದ್ಘಾಟನಾ ಭಾಷಣ ಹಾಗೂ ಇಹ್ಸಾನ್ ಕರ್ನಾಟಕ ಸಮಿತಿ ಉಪಾಧ್ಯಕ್ಷರಾದ ಡಾ| ಎಂ ಎಸ್ ಎಂ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿಯವರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಇಹ್ಸಾನ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಎಸ್ ಪಿ ಹಂಝ ಸಖಾಫಿ ಬಂಟ್ವಾಳ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ್ ಹೊರಟ್ಟಿ, ಹುಬ್ಬಳ್ಳಿ ನಗರ ಶಾಸಕರಾದ ಅರವಿಂದ್ ಬೆಲ್ಲದ್, ಹುಬ್ಬಳ್ಳಿ ಮಾಜಿ ಶಾಸಕರಾದ ಅಬ್ದುಲ್ ಹಕೀಮ್ ಹಿಂಡಿಸಗೇರಿ, ಕರ್ನಾಟಕ ವಕ್ಫ್ ಸದಸ್ಯರಾದ ಅಡ್ವಕೇಟ್ ಆಸಿಫ್ ಅಲಿ ಶೇಖ್, ಜನಾಬ್ ಅನ್ವರ್ ಬಾಷಾ, ಜನಾಬ್ ಯಾಕೂಬ್ ಯೂಸುಫ್, ಕರ್ನಾಟಕ ಮುಸ್ಲಿಮ್ ಜಮಾಅತ್ ಉಪಾಧ್ಯಕ್ಷರಾದ ಜನಾಬ್ ಸೈಫುಲ್ಲಾ ಸಾಬ್, ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಾ| ಶೇಖ್ ಬಾವ ಮಂಗಳೂರು, ಪ್ರಧಾನ ಕಾರ್ಯದರ್ಶಿ ಜನಾಬ್ ಖಮರುದ್ದೀನ್ ಗೂಡಿನಬಳಿ, ಕೆಸಿಎಫ್ ಸೌದಿ ಅರೇಬಿಯಾ ನೇತಾರರಾದ ಹಂಝ ಮೈಂದಾಳ, ಮುಸ್ತಫಾ ಹಾಸನ್, ಇಸ್ಮಾಯಿಲ್ ಜೋಗಿಬೆಟ್ಟು ಹಾಗೂ ಇನ್ನಿತರ ನೇತಾರರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿರುತ್ತಾರೆ.