ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಗಡಿ ನಿಯಂತ್ರಣ ರೇಖೆ ಬಳಿ ಭಾರತಕ್ಕೆ ಸೇರಿರುವ ಭೂ ಪ್ರದೇಶದಲ್ಲಿ ಚೀನಾ ಹಳ್ಳಿಯನ್ನು ನಿರ್ಮಿಸಿದೆ. ಆದರೆ ಈ ವಿಷಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೌನವಾಗಿರುವುದು ಅಕ್ಷಮ್ಯ ಎಂದು AIMIM ಮುಖ್ಯಸ್ಥ ಅಸದುದ್ದೀನ್ ಒವೈಸಿ ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಅರುಣಾಚಲ ಪ್ರದೇಶ, ಲಡಾಖ್, ಸಿಕ್ಕಿಂನ ಎಲ್ಎಸಿ ಬಳಿ ಚೀನಾದ ಪಿಎಲ್ಎ ಸೇನೆ ನಿರಂತರವಾಗಿ ಭಾರತದ ಭೂಪ್ರದೇಶಗಳನ್ನು ವಶಪಡಿಸಿಕೊಳ್ಳುತ್ತಿದೆ. ಆದರೆ ಪ್ರಧಾನಿ ಮೋದಿ ಮಾತ್ರ ಇವೆಲ್ಲವನ್ನು ನೋಡಿಕೊಂಡು ಮೌನವಾಗಿರುವುದು ಖಂಡನೀಯ ಎಂದು ಅಸದುದ್ದೀನ್ ಒವೈಸಿ ಹೇಳಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಶಾಶ್ವತ ಗಡಿ ಗ್ರಾಮಗಳನ್ನು ಚೀನಾ ಮೂರು ಹೊಸ ಹಳ್ಳಿಯನ್ನಾಗಿ ನಿರ್ಮಿಸುತ್ತಿದೆ. ಇದು ಚೀನಿ ಸೇನೆಯ ಚಟುವಟಿಕೆಗಳಿಗೂ ಅನುಕೂಲ ಕಲ್ಪಿಸುತ್ತದೆ. ಚೀನಾದ PLA ಸೇನೆ ಭಾರತೀಯ ಭೂ ಪ್ರದೇಶಗಳನ್ನು ಆಕ್ರಮಿಸಿಕೊಳ್ಳುತ್ತಿದ್ದು, ಪ್ರಧಾನಿ ಮೋದಿ ಈ ಕುರಿತು ಯಾಕೆ ಸುಮ್ಮನಿದ್ದಾರೆ ಇದರ ಉದ್ದೇಶವೇನು ಎಂಬುದು ದೇಶಕ್ಕೆ ತಿಳಿಸಬೇಕಾಗಿದೆ. ಪ್ರಧಾನಿ ತಮ್ಮ ಮೌನವನ್ನು ಬಿಟ್ಟು ಗಡಿ ಘರ್ಷಣೆ ಕುರಿತು ಮಾತನಾಡಬೇಕು ಎಂದು ಒವೈಸಿ ಮನವಿ ಮಾಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ